* ವಿಜಯಪುರ ನಗರದ ರೇಲ್ವೆ ಸ್ಟೇಷನ್, ಗೋಳಗುಮ್ಮಟ, ಕೀರ್ತಿ ನಗರ ಸೇರಿದಂತೆ ವಿವಿಧೆಡೆ ಭೂಕಂಪನ* ಮನಗೂಳಿ ಗ್ರಾಮದಲ್ಲಿ ಕಳೆದ ರಾತ್ರಿ 10 ಗಂಟೆ 46 ನಿಮಿಷಕ್ಕೆ ಕಂಪಿಸಿದ ಭೂಮಿ* ಭೂಕಂಪನವಾಗುತ್ತಿದ್ದಂತೆ ಭಯಭೀತರಾದ ಮನಗೂಳಿ ಗ್ರಾಮದ ಜನತೆ
ವಿಜಯಪುರ(ಜೂ.25): ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ನಿನ್ನೆ(ಶುಕ್ರವಾರ) ರಾತ್ರಿ ಲಘು ಭೂಕಂಪನ ಸಂಭವಿಸಿದೆ. ವಿಜಯಪುರ ನಗರದ ರೇಲ್ವೆ ಸ್ಟೇಷನ್, ಗೋಳಗುಮ್ಮಟ, ಕೀರ್ತಿ ನಗರ ಸೇರಿದಂತೆ ವಿವಿಧೆಡೆ ಭೂಮಿ ಕಂಪಿಸಿದ ಅನುಭವವಾಗಿದೆ ಅಂತ ತಿಳಿದು ಬಂದಿದೆ.
Add Asianetnews Kannada as a Preferred Source

ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಕಳೆದ ರಾತ್ರಿ 10 ಗಂಟೆ 46 ನಿಮಿಷಕ್ಕೆ ಭೂಕಂಪನವಾಗಿದೆ. ರಾತ್ರಿ ಭೂಮಿ ಕಂಪಿಸಿದ ಅನುಭವವಾಗುತ್ತಿದ್ದಂತೆ ಮನಗೂಳಿ ಗ್ರಾಮದ ಜನತೆ ಭಯಭೀತರಾಗಿದ್ದಾರೆ.
ಅಫ್ಘಾನಿಸ್ತಾನ ಬಳಿಕ ಹಾಸನದಲ್ಲೂ ಭೂಕಂಪನ: ಬೆಚ್ಚಿಬಿದ್ದ ಜನತೆ
ಈ ಹಿಂದೆಯೂ ಹಲವು ಬಾರಿ ಮನಗೂಳಿಯಲ್ಲಿ ಭೂಕಂಪನ ಆಗಿತ್ತು. ಕಳೆದ ಜನೆವರಿ ಹಾಗೂ ಮಾರ್ಚ್ ತಿಂಗಳಲ್ಲೂ ಸಹ ಭೂಮಿ ಕಂಪಿಸಿತ್ತು. ಇದೀಗ ಮೂರು ತಿಂಗಳ ಬಳಿಕ ಮತ್ತೆ ಲಘು ಭೂಕಂಪನ ಸಂಭವಿಸಿದೆ. ಈ ವೇಳೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ತಂಡ ಸೇರಿದಂತೆ ಹಲವು ವಿಜ್ಞಾನಿಗಳು ಭೇಟಿ ನೀಡಿದ್ದರು.
