ಜೂನ್ 25ರಿಂದ ನಾಲ್ಕು ದಿನಗಳ ಕಾಲ ಮಾರುಕಟ್ಟೆ ಬಂದ್| ಕೊರೋನಾ ಹರಡುವಿಕೆಯನ್ನ ತಡೆಯಲು ಜಿಲ್ಲಾಡಳಿತದಿಂದ ಈ ಕ್ರಮ| ಇದಲ್ಲದೆ ನಗರದ 5 ಪ್ರದೇಶಗಳಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಲು ಜಿಲ್ಲಾಡಳಿತ ನಿರ್ಧಾರ| 

ಮೈಸೂರು(ಜೂ.24): ಕೊರೋನಾ ವೈರಸ್‌ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ದೇವರಾಜ ಮಾರುಕಟ್ಟೆ, ಸಂತೆ ಪೇಟೆ, ಶಿವರಾಂಪೇಟೆ, ಮನ್ನಾರ್ಸ್ ಮಾರ್ಕೆಟ್, ಬೋಟಿ ಬಜಾರ್‌ಗಳನ್ನ ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಸಂಬಂಧ ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗ್ಡೆ ಅವರು ಆದೇಶವೊಂದನ್ನ ಹೊರಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾಳೆಯಿಂದ(ಜೂನ್ 25) ರಿಂದ ನಾಲ್ಕು ದಿನಗಳ ಕಾಲ ಬಂದ್ ಆಗಿರಲಿದೆ. ಕೊರೋನಾ ಹರಡುವಿಕೆಯನ್ನ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಈ ಕ್ರಮಕೈಗೊಂಡಿದೆ. ಇದಲ್ಲದೆ ನಗರದ 5 ಪ್ರದೇಶಗಳಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನ ತೆಗೆದುಕೊಳ್ಳಲು ಜಿಲ್ಲಾಡಳಿತ ಮುಂದಾಗಿದೆ. 

ಮೈಸೂರು: ಪೇದೆಗೆ ಅಂಟಿದ ಕೊರೋನಾ, ಅಡಿಷನಲ್‌ SP ಸ್ನೇಹಾ ಸೇರಿ 22 ಮಂದಿ ಕ್ವಾರಂಟೈನ್‌

ನಗರದ ಹೃದಯ ಭಾಗದಲ್ಲಿ ಮಹಾಮಾರಿ ಸೋಂಕು ದಾಳಿ ಇಟ್ಟಿರುವ ಹಿನ್ನಲೆಯಲ್ಲಿ ಈ ಆದೇಶವನ್ನ ಹೊರಡಿಸಲಾಗಿದೆ. ಜನರ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ. ಪ್ರತಿ ದಿನ ನಗರದ ಹಾಗೂ ಜಿಲ್ಲೆಯ ವ್ಯಾಪಾರಸ್ಥರು, ಸಾರ್ವಜನಿಕರು ಕೊರೋನಾ ಕ್ರಮಗಳನ್ನ ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ. ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನ ಪಾಲನೆ ಮಾಡದಿದ್ದಲ್ಲಿ ಅಂತಹ ಉದ್ದಿಮೆಗಳನ್ನ ಮುಚ್ಚಲಾಗುತ್ತದೆ ಎಂದು ಜಿಲ್ಲಾಡಳಿತ ಖಡಕ್‌ ಎಚ್ಚರಿಕೆ ರವಾನಿಸಿದೆ.