* ಕಾಂಗ್ರೆಸ್‌ ಸಹಾಯ ಹಸ್ತ ಕಾರ್ಯಕ್ರಮ ಉದ್ಘಾಟಿಸಿದ ಹರಿಪ್ರಸಾದ* ರಾಜ್ಯ ಸರ್ಕಾರವಾಗಿ ಜೀವಂತವಾಗಿದೆಯೇ ಇಲ್ಲೋ ಗೊತ್ತಿಲ್ಲ?* ಅಭಿವೃದ್ಧಿ ಕೆಲಸಗಳಿಗೆ ಬಿಡಿಗಾಸು ನೀಡದ ಬಿಜೆಪಿ ಸರ್ಕಾರ

ದಾಂಡೇಲಿ(ಜು.17): ಕಾಂಗ್ರೆಸ್‌ ಪ್ರತಿಯೊಬ್ಬ ನಾಗರಿಕರನ ಕಣ್ಣೀರು ಒರೆಸುವ ಗುರಿ ಹೊಂದಿದ್ದು ಮಹಾತ್ಮ ಗಾಂಧೀಜಿ ಅವರ ಕಾಲದಿಂದ ನಡೆದುಕೊಂಡು ಬಂದಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ. ಹರಿಪ್ರಸಾದ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಅವರು ನಗರದ ಸಯ್ಯದ್‌ ಸಮುದಾಯದ ಭವನದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್‌ ಸಹಾಯ ಹಸ್ತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕೊರೋನಾ ಸೋಂಕಿನಿಂದ ಬಳಲಿದ ದೇಶದ ಪ್ರತಿಯೊಬ್ಬ ಪ್ರಜೆಯ ಮನೆಗೆ ಭೇಟಿ ಅವರಿಗೆ ಸಹಾಯ ಹಸ್ತ ನೀಡಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಕೊರೋನಾ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಜನರಿಗೆ ಉತ್ತಮ ಸೇವೆ ಹಾಗೂ ಜೀವರಕ್ಷಣೆಯ ಸೌಲಭ್ಯ ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿವೆ. ಹೀಗಾಗಿ ದೇಶದ ಬಹುತೇಕ ಜನರು ಈ ಸರ್ಕಾರಗಳ ಮೇಲೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದರು.

ಚೇರ್‌ಗಾಗಿ ಬಿಜೆಪಿಯಲ್ಲಿ ಕಿತ್ತಾಟ: ಬಿ.ಕೆ.ಹರಿಪ್ರಸಾದ

ಶಾಸಕ ಆರ್‌.ವಿ. ದೇಶಪಾಂಡೆ ಮಾತನಾಡಿ, ರಾಜ್ಯ ಸರ್ಕಾರವಾಗಿ ಜೀವಂತವಾಗಿದೆಯೇ ಇಲ್ಲೋ ಗೊತ್ತಿಲ್ಲ. ಅಭಿವೃದ್ಧಿ ಕೆಲಸಗಳಿಗೆ ಬಿಡಿಗಾಸು ನೀಡುತ್ತಿಲ್ಲ. ಅಭಿವೃದ್ಧಿ ಕೆಲಸಗಳು ಗುಣಮಟ್ಟದಿಂದ ಕೂಡಿಲ್ಲ ಎಂದು ದೂರಿದರು.

ಈ ವೇಳೆ ಎಂಎಲ್‌ಸಿ ಎಸ್‌.ಎಲ್‌. ಘೋಟ್ನೇಕರ, ಪಕ್ಷದ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ, ನಾಗರಾಜ ನಾರ್ವೇಕ್ರ, ವಿ.ಎಸ್‌. ಆರಾಧ್ಯ, ಬಸವರಾಜ ದೊಡ್ಡಮನೆ, ದಾಂಡೇಳಿ ನಗರಸಭೆ ಅಧ್ಯಕ್ಷೆ ಸರಸ್ವತಿ ರಜಪೂತ, ಉಪಾಧ್ಯಕ್ಷ ಸಂಜಯ ನಂದ್ಯಾಳಕರ, ವಿ.ಆರ್‌. ಹೆಗಡೆ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.