ಬಡತನ, ಬಾಲ್ಯವಿವಾಹ, ಮಾನವ ಕಳ್ಳಸಾಗಾಣಿಕೆ, ಅನಕ್ಷರತೆಯಿಂದ ಲೈಂಗಿಕ ಕಾರ್ಯಕರ್ತೆಯರಾಗಿ ಬದಲಾಗಿದ್ದಾರೆ| ಇದರಿಂದ ಊಟಕ್ಕೂ ಪರದಾಡುವ ಪರಿಸ್ಥಿತಿ|  ರಾಜ್ಯ ಸರ್ಕಾರ ಕೂಡಲೇ ಗಮನ ಹರಿಸಬೇಕು|

ಬಳ್ಳಾರಿ(ಮೇ.24): ಕೊರೋನಾ ವೈರಸ್‌ನಿಂದಾದ ಲಾಕ್‌ಡೌನ್‌ನಿಂದಾಗಿ ಲೈಂಗಿಕ ಕಾರ್ಯಕರ್ತೆಯರು ತೀವ್ರ ಶೋಚನೀಯ ಬದುಕು ನಡೆಸುತ್ತಿದ್ದು ರಾಜ್ಯ ಸರ್ಕಾರ ಕೂಡಲೇ ಅಗತ್ಯ ನೆರವು ನೀಡಬೇಕು ಎಂದು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್‌) ಆಗ್ರಹಿಸಿದೆ.

Add Asianetnews Kannada as a Preferred SourcegooglePreferred

ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿರುವ ಸಂಘಟನೆಯ ಮುಖಂಡರು, ಬಡತನ, ಬಾಲ್ಯವಿವಾಹ, ಮಾನವ ಕಳ್ಳಸಾಗಾಣಿಕೆ, ಅನಕ್ಷರತೆಯಿಂದ ಲೈಂಗಿಕ ಕಾರ್ಯಕರ್ತೆಯರಾಗಿ ಬದಲಾಗಿದ್ದಾರೆ. ಇದರಿಂದ ಊಟಕ್ಕೂ ಪರದಾಡುವ ಪರಿಸ್ಥಿತಿ ಇದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಗಮನ ಹರಿಸಬೇಕು ಎಂದು ಹೇಳಿದ್ದಾರೆ. 

ಕೊರೋನಾ ಕಾಟ: ಆಹಾರ ಸಿಗದೆ ಲೈಂಗಿಕ ಕಾರ್ಯಕರ್ತೆಯರ ಪರದಾಟ!

ಲೈಂಗಿಕ ವೃತ್ತಿಯನ್ನು ನಿರ್ಮೂಲನೆಗೊಳಿಸುವ ದಿಸೆಯಲ್ಲಿ ಈ ವೃತ್ತಿಗೆ ಇಳಿದವರಿಗೆ ಅಗತ್ಯ ನೆರವು ನೀಡಿ ಸ್ವಯಂ ಉದ್ಯೋಗ ಮಾಡಿಕೊಂಡು ಬದುಕು ಕಟ್ಟಿಕೊಳ್ಳಲು ನೆರವಾಗಬೇಕು ಎಂದು ಮನವಿಯಲ್ಲಿ ಎಐಎಂಎಸ್‌ಎಸ್‌ನ ಜಿಲ್ಲಾ ಪ್ರಮುಖರು ಒತ್ತಾಯಿಸಿದ್ದಾರೆ. ಸಂಘಟನೆಯ ಜಿಲ್ಲಾಧ್ಯಕ್ಷೆ ಎ.ಶಾಂತಾ, ವಿದ್ಯಾ, ಎಂ.ಹುಸೇನ್‌ ಇತರರಿದ್ದರು.