Asianet Suvarna News Asianet Suvarna News

ಏರ್ ಶೋ ಬೆಂಗಳೂರಿನಿಂದ ಲಕ್ನೋಗೆ ಶಿಫ್ಟ್ ಆಗಲ್ಲ: ಬಿಎಸ್‌ವೈ

ಏರ್ ಶೋ ಬೆಂಗಳೂರು ಬಿಟ್ಟು ಹೋಗದಂತೆ ಬಿಜೆಪಿಯ ಎಲ್ಲ ಕೇಂದ್ರ ಸಚಿವರು, ಸಂಸದರು ಪ್ರಯತ್ನ ಮಾಡುತ್ತೇವೆ.  ಡಿಸಿಎಂ ಪರಮೇಶ್ವರ ಹಾಗೂ ಸಚಿವ  ಡಿ.ಕೆ ಶಿವಕುಮಾರ್ ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ.  ಈಗಾಗಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸ್ಥಳಾಂತರ ಬಗ್ಗೆ ಚರ್ಚೆ ಸರಿಯಲ್ಲ ಅಂತ ಕಾಂಗ್ರೆಸ್ ವಿರುದ್ಧ ಬಿ.ಎಸ್.ವೈ ಕಿಡಿ ಕಾರಿದ್ದಾರೆ. 

Air Show do not shift from Bengaluru to Lucknow says BSY
Author
Bengaluru, First Published Aug 13, 2018, 12:33 PM IST

ಗದಗ (ಆ. 13):  ಏರ್ ಶೋ‌ ಬೆಂಗಳೂರಿನಿಂದ ಲಕ್ನೋಗೆ ಶಿಫ್ಟ್ ಆಗಲ್ಲ ಎಂದು  ವಿಪಕ್ಷ ನಾಯಕ‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. 

ಬೆಂಗಳೂರು ಬಿಟ್ಟು ಹೋಗದಂತೆ ಬಿಜೆಪಿಯ ಎಲ್ಲ ಕೇಂದ್ರ ಸಚಿವರು, ಸಂಸದರು ಪ್ರಯತ್ನ ಮಾಡುತ್ತೇವೆ.  ಡಿಸಿಎಂ ಪರಮೇಶ್ವರ ಹಾಗೂ ಸಚಿವ  ಡಿ.ಕೆ ಶಿವಕುಮಾರ್ ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ.  ಈಗಾಗಲೇ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮ್ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸ್ಥಳಾಂತರ ಬಗ್ಗೆ ಚರ್ಚೆ ಸರಿಯಲ್ಲ ಅಂತ ಕಾಂಗ್ರೆಸ್ ವಿರುದ್ಧ ಬಿ.ಎಸ್.ವೈ ಕಿಡಿ ಕಾರಿದ್ದಾರೆ. 

ಸಿಎಂ ಭತ್ತ ನಾಟಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ,  ಉತ್ತರ ಕರ್ನಾಟಕದ 13 ಜಿಲ್ಲೆಯಲ್ಲಿ ತೀವ್ರ ಬರಗಾಲ ಇದೆ.  ರಾಜಕೀಯ ದೊಂಬರಾಟ ಬಿಟ್ಟು  ರೈತರ ಜ್ವಲಂತ ಸಮಸ್ಯೆಗಳನ್ನು ಇತ್ಯರ್ಥ ಮಾಡಲಿ.  ಕೇವಲ ಒಂದು ಜಿಲ್ಲೆಯಲ್ಲಿ ನಾಟಿ ಮಾಡಿದ್ರೆ ರೈತರ ಸಮಸ್ಯೆ ಬಗೆಹರಿಯಲ್ಲ.  ಉತ್ತರ ಕರ್ನಾಟಕದಲ್ಲಿ ತೀವ್ರ ಬರಗಾಲ ಇದೆ.  ಸಿ.ಎಂ ಕುಮಾರಸ್ವಾಮಿ ಪ್ರವಾಸ ಮಾಡಿ ರೈತರ ಸಮಸ್ಯೆ ಅರಿಯಲಿ ಎಂದು ಬಿಎಸ್ ವೈ ಹೇಳಿದ್ದಾರೆ. 
 

Follow Us:
Download App:
  • android
  • ios