Asianet Suvarna News Asianet Suvarna News

ತುಮಕೂರಲ್ಲಿ ಐಟಿ ಹಬ್‌ ಸ್ಥಾಪನೆಯಾಗಬೇಕು :ಮುರಳೀಧರ ಹಾಲಪ್ಪ

ತುಮಕೂರಿನಲ್ಲಿ ಐಟಿ ಹಬ್‌ ಸ್ಥಾಪನೆಯಾಗಬೇಕು, ಇದು ತುಮಕೂರಿನ ಬ್ರಾಂಡ್‌ ಎಂಬ ಹೆಗ್ಗಳಿಕೆಗೆ ತುಮಕೂರು ಪಾತ್ರವಾಗಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.

An IT hub should be established at Tumkur snr
Author
First Published Nov 13, 2022, 4:46 AM IST

 ತುಮಕೂರು (ನ.13:  ತುಮಕೂರಿನಲ್ಲಿ ಐಟಿ ಹಬ್‌ ಸ್ಥಾಪನೆಯಾಗಬೇಕು, ಇದು ತುಮಕೂರಿನ ಬ್ರಾಂಡ್‌ ಎಂಬ ಹೆಗ್ಗಳಿಕೆಗೆ ತುಮಕೂರು ಪಾತ್ರವಾಗಬೇಕು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು.

ನಗರದ ಎಸ್‌ಎಸ್‌ಐಟಿ (SSIT)  ಕ್ಯಾಂಪಸ್‌ನ ಪಿ.ಜಿ.ಸಭಾಂಗಣದಲ್ಲಿ ಎಂಜಿನಿಯರಿಂಗ್‌  ಮತ್ತು ಪ್ರಥಮ ದರ್ಜೆ ಕಾಲೇಜಿನ (College) ಬೋಧಕ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಯುವ ಸಬಲೀಕರಣ ಮತ್ತು ಉದ್ಯಮಶೀಲತೆ ಹಾಗೂ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಈ ನಿಟ್ಟಿನಲ್ಲಿ ಇಂದಿನ ಯುವಪೀಳಿಗೆ ಯೋಚನೆ ಮಾಡುವಂತಾಗಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಲವಾರು ಯೋಜನೆಗಳು ಇಂದಿನ ಯುವಜನತೆಗಾಗಿ ಇದ್ದು, ಈ ಯೋಜನೆಗಳ ಬಗ್ಗೆ ಕೂಲಂಕುಷವಾಗಿ ತಿಳಿದುಕೊಂಡು ಮುನ್ನಡೆದರೆ ನಿಮ್ಮ ಭವಿಷ್ಯ ಭದ್ರ ಬುನಾದಿಯಾಗಬಲ್ಲದು. ತುಮಕೂರು ಶೈಕ್ಷಣಿಕ ಜಿಲ್ಲೆಯಾಗಿದ್ದು, ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣ ಪಡೆಯಬೇಕೆಂದರೆ ಅದಕ್ಕೆ ಬೇಕಾದ ಸಾಲಸೌಲಭ್ಯ, ಉದ್ಯಮಿಗಳಾಗಬೇಕೆಂದರೆ ಸಾಲಸೌಲಭ್ಯ, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಐಎಎಸ್‌, ಐಪಿಎಸ್‌, ಕೆಎಎಸ್‌ ಮುಂತಾದ ಪರೀಕ್ಷೆಗಳನ್ನು ಎದುರಿಸಲು ಬೇಕಾದ ಕೌಶಲ್ಯವನ್ನು ಹೇಗೆ ಬೆಳೆಸಿಕೊಳ್ಳಬೇಕು ಎಂಬುದರ ಬಗ್ಗೆ ಈ ಕಾರ್ಯಕ್ರಮದಲ್ಲಿ ತಿಳಿಸಿಕೊಡಲಾಗುತ್ತಿದೆ ಎಂದರು.

ಕರ್ನಾಟಕ ಸಂಕಲ್ಪ್‌ ಸಂಸ್ಥೆಯ ಸತೀಶ್‌ ಮಾತನಾಡಿ, ಪ್ರಧಾನಮಂತ್ರಿ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಬರುವ ಉಡುಪು, ವಿನ್ಯಾಸ, ಎಲೆಕ್ಟ್ರೀಷಿಯನ್‌, ಅಡುಗೆ ಕೌಶಲ್ಯ ಸೇರಿದಂತೆ ವಿವಿಧ ರೀತಿಯ ತರಬೇತಿಗಳನ್ನು ಪಡೆದು ಸ್ವಯಂ ಉದ್ಯೋಗಿಗಳಾಗಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಸಿಡಾಕ್‌ ಸಂಸ್ಥೆಯ ಜಂಟಿ ನಿರ್ದೇಶಕ ಅಶ್ವಿನ್‌ ಮಾತನಾಡಿ, ಉದ್ದಿಮೆ ಮಾಡಬೇಕೆಂದರೆ ಅವರಲ್ಲಿ ಉದ್ಯಮ ಶೀಲತೆ ಇರಬೇಕು ಆಗ ಮಾತ್ರ ಉದ್ದಿಮೆಯಲ್ಲಿ ಯಶಸ್ಸುಗಳಿಸಲು ಸಾಧ್ಯ. ರಾಜಸ್ಥಾನದಿಂದ ಬಂದವರು ಇಲ್ಲಿ ಸಾಲ ಪಡೆದು ಉದ್ಯಮದಲ್ಲಿ ಶೇ.90ರಷ್ಟುಯಶಸ್ಸು ಗಳಿಸುತ್ತಾರೆ. ಆದರೆ ನಮ್ಮಲ್ಲಿ ಬಹಳ ಕಡಿಮೆ ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸಿದ್ಧೇಶ್‌ ಮಾತನಾಡಿ, ಸರ್ಕಾರದಿಂದ ಉದ್ದಿಮೆ ಸ್ಥಾಪನೆಗೋಸ್ಕರ ಹಲವಾರು ಯೋಜನೆಗಳಿದ್ದು, 25 ಲಕ್ಷ ಇದ್ದ ಸಾಲದ ಮೊತ್ತವನ್ನು 50 ಲಕ್ಷಕ್ಕೆ ಏರಿಸಿದ್ದು, ಉದ್ಯಮ ಆರಂಭಿಸುವವರು ಅರ್ಜಿ ಸಲ್ಲಿಸಿ ಮಾಹಿತಿಯನ್ನು ಪಡೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್‌ಎಸ್‌ಐಟಿ ಡೀನ್‌ ಡಾ.ಕೆ.ಕರುಣಾಕರ್‌, ಇನ್‌ಕ್ಯಾಬ್‌ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕ ಪ್ರಕಾಶ್‌, ಎಚ್‌ಸಿಎಲ್‌ನ ಪವನ್‌ ಶರ್ಮಾ, ಮೈಕ್ರೋಸಾಫ್‌್ಟಸಂಸ್ಥೆಯ ರಾಜ್ಯ ಮುಖ್ಯಸ್ಥ ಕಿಶೋರ್‌ ತಂಗವೇಲು, ಸಿಡಾಕ್‌ ಸಂಸ್ಥೆಯ ಜಂಟಿ ನಿರ್ದೇಶಕ ಅಶ್ವಿನ್‌, ಸಿದ್ಧಾಥ್‌ರ್‍, ಡಾ.ಎಲ್‌.ಸಂಜೀವ್‌ ಕುಮಾರ್‌, ಜಿಲ್ಲಾ ಉದ್ಯೋಗ ಮತ್ತು ತರಬೇತಿ ಇಲಾಖೆ ಅಧಿಕಾರಿ ಕೆ. ಶ್ರೀನಿವಾಸ್‌, ಯುಕ್ತ ಕೌಶಲ್ಯ ಸಂಸ್ಥೆಯ ದಿಲೀಪ್‌, ಎಸ್‌ಎಸ್‌ಐಟಿ ಕಾಲೇಜಿನ ಪ್ರಾಂಶುಪಾಲರು, ಬೋಧಕ ಸಿಬ್ಬಂದಿ, ವಿವಿಧ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

ಸಿಡಾಕ್‌, ಲೀಡ್‌ ಬ್ಯಾಂಕ್‌, ಬಾಷ್‌, ಮೈಕ್ರೋಸಾಫ್‌್ಟ, ಫ್ಲಿಫ್‌ ಕಾರ್ಚ್‌, ಎಲ್ಸಿಯಾ, ಎಚ್‌ಸಿಎಲ್‌, ಮಹಿಂದ್ರಾ ಟೆಕ್‌ ಸೇರಿದಂತೆ ಹಲವಾರು ಕಂಪನಿಗಳ ಪ್ರತಿನಿಧಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಅಗತ್ಯ ಮಾಹಿತಿಯನ್ನು ನೀಡಿದರು.

ಕೋಟ್‌......1

ತುಮಕೂರಿನ ಎಸ್‌ಎಸ್‌ಐಟಿ ಕ್ಯಾಂಪಸ್‌ನಲ್ಲಿ ಎರಡು ದಿನಗಳ ಬೃಹತ್‌ ಉದ್ಯೋಗ ಮೇಳವನ್ನು ಆಯೋಜಿಸಿ ಯುವಕರಿಗೆ ಉದ್ಯೋಗ ಕಲ್ಪಿಸುವ ಗುರಿಯನ್ನು ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಕುಲಾಧಿಪತಿಗಳು ಹಾಗೂ ಮಾಜಿ ಉಪಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ್‌ ಅವರು ಹೊಂದಿದ್ದು, ಶೀಘ್ರವಾಗಿ ಉದ್ಯೋಗ ಮೇಳ ಆಯೋಜಿಸಲಾಗುವುದು.

ಮುರಳೀಧರ ಹಾಲಪ್ಪ ಮಾಜಿ ಅಧ್ಯಕ್ಷ,ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ

ಕೋಟ್‌......2

ಸ್ಕಿಲ್‌ ಕನೆಕ್ಟ್ ಆಥರೈಸ್ಡ್‌ ಜಾಬ್‌ ಪೋರ್ಟಲ್‌ ಈ ತಿಂಗಳ 16ರಂದು ಉದ್ಘಾಟನೆಗೊಳ್ಳಲಿದ್ದು, ಇದರಲ್ಲಿ ವಿದ್ಯಾರ್ಥಿಗಳು ನೊಂದಾಯಿಸಿಕೊಂಡರೆ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ವಿದ್ಯಾರ್ಥಿಗಳು ನಕಾರಾತ್ಮಕ ಯೋಚನೆಗಳನ್ನು ಬಿಟ್ಟು, ಸಕಾರಾತ್ಮಕ ಯೋಚನೆ ಮಾಡಿದರೆ ನಿಮ್ಮ ಭವಿಷ್ಯ ಉಜ್ವಲಗೊಳ್ಳಲಿದೆ.

ಕೆ.ಶ್ರೀನಿವಾಸ್‌ ಜಿಲ್ಲಾ ಉದ್ಯೋಗ ಮತ್ತು ತರಬೇತಿ ಇಲಾಖೆ ಅಧಿಕಾರಿ

ಫೋಟೋ ಫೈಲ್‌ 12ಟಿಯುಎಂ2

ತುಮಕೂರು ನಗರದ ಎಸ್‌ಎಸ್‌ಐಟಿ ಕ್ಯಾಂಪಸ್‌ನ ಪಿ.ಜಿ.ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಉದ್ಯಮಶೀಲತೆ ಹಾಗೂ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Follow Us:
Download App:
  • android
  • ios