ಬಿಜೆಪಿಗೆ ಬಹುಮತವಿದ್ದರೂ ಏನು ಪ್ರಯೋಜನ| ಮತಾಂಧರ ವಿಷಯದಲ್ಲಿ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ| ವ್ಯವಸ್ಥಿತ ಪಿತೂರಿಯ ಫಲವೇ ಈ ಧಂಗೆ| ಮೂರ್ನಾಲ್ಕು ದಿನ ಪ್ಲಾನ್‌ ರೂಪಿಸಿ ಮಾಡಿರುವಂತಹ ಘಟನೆ ಇದು ಎಂದ ಆಂದೋಲಶ್ರೀ| 

ಕಲಬುರಗಿ(ಆ.16): ಈಗ ಕಾಂಗ್ರೆಸ್‌ ಶಾಸಕನ ಮನೆಗೆ ಬೆಂಕಿ ಹಚ್ಚಿದ್ದಾರೆ. ಮುಂದೆ ನಿಮ್ಮ ಮನೆಗಳಿಗೂ ಬೆಂಕಿ ಹಚ್ಚಲಿದ್ದಾರೆ ಎಂದು ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಆಂದೋಲಶ್ರೀ ಸಿದ್ದಲಿಂಗ ಸ್ವಾಮಿಗಳು ರಾಜ್ಯ ಬಿಜೆಪಿ ಜನನಾಯಕರ ವಿರುದ್ಧ ಕಿಡಿಕಾರಿದ್ದಾರೆ. 

Add Asianetnews Kannada as a Preferred SourcegooglePreferred

ಬೆಂಗಳೂರಿನ ಡಿ.ಜೆ.ಹಳ್ಳಿ ಮತ್ತು ಕೆ.ಜಿ. ಹಳ್ಳಿಗಳ ಗಲಭೆ ಖಂಡಿಸಿದ ಅಂದೋಲಶ್ರೀ ಇದು ಆಕಸ್ಮಿಕವಾಗಿ ನಡೆದದ್ದಲ್ಲ, ವ್ಯವಸ್ಥಿತ ಪಿತೂರಿಯ ಫಲವೇ ಈ ಧಂಗೆ. ಮೂರ್ನಾಲ್ಕು ದಿನ ಪ್ಲಾನ್‌ ರೂಪಿಸಿ ಮಾಡಿರುವಂತಹ ಘಟನೆ ಇದು. ಆದರೆ, ಇದನ್ನು ತಡೆಯೋ ಶಕ್ತಿ ಬಿಜೆಪಿ ಸರ್ಕಾರಕ್ಕಿದ್ದಿಲ್ಲವೇ ಎಂದು ಪ್ರಶ್ನಸಿದ್ದಾರೆ. 

ಬೆಂಗಳೂರು ಗಲಭೆ: SDPI ಕಚೇರಿಯಲ್ಲಿ ಅಡಗಿ ಕುಳಿತಿದ್ದ ಪುಂಡರು ಅರೆಸ್ಟ್‌..!

ಬಿಜೆಪಿಗೆ ಬಹುಮತವಿದ್ದರೂ ಏನು ಪ್ರಯೋಜನ ಎಂದು ಕಿಡಿಕಾರಿರುವ ಅವರ, ಮತಾಂಧರ ವಿಷಯದಲ್ಲಿ ರಾಜ್ಯ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ ಎಂದು ಆಂದೋಲಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.