ಆಪರೇಷನ್ ಕಮಲ ಮಾಡ್ತೀವಿ ಅಂತೆಲ್ಲ ಹೇಳಿಕೆ ನೀಡುವುದರಲ್ಲಿಯೇ ಬ್ಯುಸಿಯಾಗಿರುವ ಬಿಜೆಪಿಗೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್ ಸಂಸದ ಡಿಕೆ ಸುರೇಶ್, ಜೆಡಿಎಸ್, ಬಿಜೆಪಿ ನಾಯಕರನ್ನು ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ಸಿಗೆ ಸೇರ್ಪಡೆಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಂಗಳೂರು, [ಮೇ.12]: ಆನೇಕಲ್ ಪುರಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರು ಆಪರೇಷನ್ ಹಸ್ತ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆನೇಕಲ್ ಪುರಸಭೆ ಸದಸ್ಯ, ಜೆಡಿಎಸ್ ಮುಖಂಡ ಪದ್ಮನಾಭ್ ಹಾಗೂ ಆನೇಕಲ್ ಬಿಜೆಪಿ ಘಟಕದ ಉಪಾಧ್ಯಕ್ಷ ಶಿವರಾಂ ಅವರನ್ನು ಆಪರೇಷನ್ ಹಸ್ತದ ಮೂಲಕ ಕಾಂಗ್ರೆಸ್ ಗೆ ಸೇರಿಸಿಕೊಂಡರು. 

ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ. ಸುರೇಶ್, ಬಾಯಿಚಪಲಕ್ಕೆ ಮಾತನಾಡುವುದೆಲ್ಲ ನಿಜವಾಗುವುದಿಲ್ಲ. 20 ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂದು ಬಿ.ಎಸ್.ಯಡಿಯೂರಪ್ಪನರು ಹೇಳುತ್ತಾರೆ. ಆದರೆ ನಮ್ಮ ಬಳಿ ಬಿಜೆಪಿಯ 40 ಶಾಸಕರು ಸಂಪರ್ಕದಲ್ಲಿದ್ದಾರೆ ಎಂದು ತಿರುಗೇಟು ನೀಡಿದರು.

ಲೋಕಸಭಾ ಚುನಾವಣೆ ಫಲಿತಾಂಶ ಮೇ 23ರಂದು ಹೊರಬೀಳಲಿದೆ. ಫಲಿತಾಂಶದ ನಂತರ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಆಗಲಿದೆಯೇ ಹೊರತು ಮೈತ್ರಿ ಸರ್ಕಾರದಲ್ಲಿ ಆಗುವುದಿಲ್ಲ ಎಂದು ಹೇಳಿದರು.