ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ| ದನ ಕರುಗಳ ಸಜೀವ ದಹನ| ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದ ಘಟನೆ| 

ಬೆಳಗಾವಿ(ಆ.16): ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ಬಿದ್ದು ಪರಿಣಾಮ ದನ, ಕರುಗಳ ಸಜೀವವಾಗಿ ದಹನವಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಕಿತ್ತೂರು ತಾಲೂಕಿನ ತೇಗೂರು ಗ್ರಾಮದ ಹೊರವಲಯದಲ್ಲಿ ನಿನ್ನೆ ತಡರಾತ್ರಿ(ಶನಿವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಘಟನೆಯಲ್ಲಿ ಎರಡು ಎತ್ತು, ಎರಡು ಆಕಳು, ಎರಡು ಕರುಗಳು, ಒಂದು ಕುರಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಶಿವರಾಯ ಚಂದ್ರಪ್ಪ ಪಾಗದ ಎಂಬುವರಿಗೆ ಸೇರಿದ ಜಾನುವಾರುಗಳು ಎಂದು ತಿಳಿದು ಬಂದಿದೆ. 

1824ರಲ್ಲಿ ಬ್ರಟಿಷರ ವಿರುದ್ಧ ತೊಡೆತಟ್ಟಿ ನಿಂತ ಸಂಗೊಳ್ಳಿ ರಾಯಣ್ಣ; ಈಗಲೂ ಬದುಕ್ಕಿದ್ದಾನೆ ಕ್ರಾಂತಿವೀರ!

ಶಿವರಾಯ ಚಂದ್ರಪ್ಪ ಪಾಗದ ಅವರು ತಮ್ಮ ಹೊಲದಲ್ಲಿ ಗುಡಿಸಲು ನಿರ್ಮಿಸಿ ಅಲ್ಲಿಯೇ ದನ ಕರುಗಳನ್ನು ಕಟ್ಟಿದ್ದರು. ಶಿವರಾಯ ಚಂದ್ರಪ್ಪ ಪಾಗದ ರಾತ್ರಿ ಊಟಕ್ಕೆಂದು ಮನೆಗೆ ಬಂದ ವೇಳೆಯಲ್ಲಿ ಈ ಅವಘಡ ಸಂಭವಿಸಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.