ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಗರ್ಭಪಾತ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣು ಎಂದು ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂದು ಗೊತ್ತಾಗಿದೆ. ಪಟ್ಟಣದ ಪಾಟೀಲ್​ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಡಾ.ರಾಜೇಂದ್ರ ಪಾಟೀಲ್ ವಿರುದ್ಧ ದೂರು ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದ 24 ವರ್ಷದ ‌ಮಹಿಳೆಗೆ 14 ವಾರಗಳ ಭ್ರೂಣದ ಗರ್ಭಪಾತ ಮಾಡಲಾಗಿದೆ. 

ಬಾಗಲಕೋಟೆ(ಸೆ.07): ಗರ್ಭಪಾತದಿಂದ ಮಹಾರಾಷ್ಟ್ರದ ಮಿರಜ್‌ ಮೂಲದ ಗೃಹಿಣಿಯೊಬ್ಬಳು ಮೃತಪಟ್ಟ ಘಟನೆ ಇನ್ನೂ ಹಸಿರಿರುವಾಗಲೇ ಮತ್ತೊಂದು ಗರ್ಭಪಾತ ಪ್ರಕರಣ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಗರ್ಭಪಾತ ಪ್ರಕರಣ ಬೆಳಕಿಗೆ ಬಂದಿದೆ. ಹೆಣ್ಣು ಎಂದು ಗರ್ಭಪಾತ ಮಾಡುವ ವೇಳೆ ಗಂಡು ಮಗು ಎಂದು ಗೊತ್ತಾಗಿದೆ. ಪಟ್ಟಣದ ಪಾಟೀಲ್​ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಡಾ.ರಾಜೇಂದ್ರ ಪಾಟೀಲ್ ವಿರುದ್ಧ ದೂರು ನೀಡಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಮುಧೋಳ ತಾಲೂಕಿನ ರನ್ನಬೆಳಗಲಿ ಗ್ರಾಮದ 24 ವರ್ಷದ ‌ಮಹಿಳೆಗೆ 14 ವಾರಗಳ ಭ್ರೂಣದ ಗರ್ಭಪಾತ ಮಾಡಲಾಗಿದೆ ಎಂದು ಹೇಳಲಾಗಿದೆ.

ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ; ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!

ಅಧಿಕಾರಿಗಳ ಭೇಟಿ, ಪರಿಶೀಲನೆ:

ಗರ್ಭಪಾತ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಡಿಎಚ್‌ಒ ಸುವರ್ಣ ಕುಲಕರ್ಣಿ, ಮುಧೋಳ ಟಿಎಚ್‌ಒ ಮಲಘಾಣ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾತ್ರವಲ್ಲ, ಡೆಲಿವರಿ ಥಿಯೇಟರ್, ಸ್ಕ್ಯಾನಿಂಗ್ ಸೆಂಟರ್, ಎಮ್​ಆರ್​ಡಿ ರೂಮ್ ಸೀಜ್ ಮಾಡಿದ್ದಾರೆ.

ಇನ್ನು ಘಟನೆ ಬೆಳಕಿಗೆ ಬರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಬಾಗಲಕೋಟೆ ಡಿಹೆಚ್​ಒ ಸುವರ್ಣ ಕುಲಕರ್ಣಿ ಹಾಗೂ ಮುಧೋಳ ಟಿಹೆಚ್​ಒ ಮಲಘಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಕ್ಷಣ ಡೆಲಿವರಿ ಥಿಯೇಟರ್, ಸ್ಕ್ಯಾನಿಂಗ್ ಸೆಂಟರ್, ಎಮ್​ಆರ್​ಡಿ ರೂಮ್ ಸೀಜ್ ಮಾಡಿದ್ದಾರೆ.

ಇತ್ತೀಚೆಗಷ್ಟೇ ಮಹಾಲಿಂಗಪುರದಲ್ಲಿ ಗರ್ಭಪಾತದಿಂದ ಮಹಾರಾಷ್ಟ್ರ ಮಹಿಳೆ ಅಸುನೀಗಿದ್ದಳು. ಹೀಗಾಗಿ ಏಳು ಜನರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿತ್ತು. ಇಷ್ಟಾಗಿದ್ದರೂ ಈಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.