ಕೊರೋನಾ ಕಾಲದಲ್ಲಿ ಜೀವದ ಹಂಗು ತೊರೆದು ಹೋರಾಡುತ್ತಿರುವ ವಾರಿಯರ್ಸ್ ಗಳಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಕಲಾನಮನ ಸಲ್ಲಿಸಲಾಗಿದ.

ಮಣಿಪಾಲ (ಆ.14) :  ಸ್ವಾತಂತ್ರ್ಯೋತ್ಸವದಂಗವಾಗಿ ಕಲಾವಿದ ಶ್ರೀನಾಥ್ ಮಣಿಪಾಲ್ ಅವರು ಇಲ್ಲಿನ ಕಸ್ತೂರ್ಬಾ ಆಸ್ರತ್ರೆಯ ಸಮುದಾಯ ವೈದ್ಯಕೀಯ ವಿಭಾಗದ ಸಹಯೋಗದಲ್ಲಿ ಆಸ್ಪತ್ರೆಯ ಆವರಣದಲ್ಲಿ ಬೃಹತ್ ವರ್ಣಚಿತ್ರವನ್ನು ರಚಿಸಿ ಕೊರೊನಾ ವಿರುದ್ಧ ಹೋರಾಡುತ್ತಿರುವ ಸೈನಿಕರಿಗೆ ಗೌರವ ಸಮರ್ಪಿಸಿದ್ದಾರೆ.

Add Asianetnews Kannada as a Preferred SourcegooglePreferred

 ಆಸ್ಪತ್ರೆಯ ಡೀನ್ ಡಾ.ಶರತ್ ರಾವ್ ಅವರು ಕಲಾಕೃತಿಯನ್ನು ಸಾರ್ವಜನಿಕ ವೀಕ್ಷಣಗೆ ಅನಾವರಣಗೊಳಿಸಿದರು. ಸಮುದಾಯ ವೈದ್ಯಕೀಯ ವಿಭಾಗದ ಡಾ.ಸುಮ ನಾಯರ್, ಡಾ. ವೀಣಾ ಕಾಮತ್, ಡಾ.ಈಶ್ವರಿ ಆಚಾರ್ ಮತ್ತಿತರರು ಉಪಸ್ಥಿತರಿದ್ದರು. 

ಸದ್ಯಕ್ಕೆ ಶಾಲೆ ಇಲ್ಲ: ಪ್ರೌಢ ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಹೊಸ ಕಾರ್ಯಕ್ರಮ...!.

 ಜಲವರ್ಣ ಮಾಧ್ಯಮದಲ್ಲಿ ರಚಿಸಲಾಗಿರುವ ಈ ಕಲಾಕೃತಿಯು 320 ಚದರ ಅಡಿ ವಿಸ್ತೀರ್ಣವನ್ನು ಹೊಂದಿದೆ. ಈ ಕಲಾಕೃತಿಯ ಮೂಲಕ ಕೊರೋನಾ ವಿರುದ್ಧ ಹೋರಾಟ ನಡೆಸುತ್ತಿರುವ ಪೊಲೀಸರಿಗೆ, ವೈದ್ಯರಿಗೆ, ದಾದಿಯರಿಗೆ, ಪೌರಕಾರ್ಮಿಕರಿಗೆ ಮತ್ತು ಪತ್ರಕರ್ತರಿಗೆ ಗೌರವ ಸಲ್ಲಿಸಲಾಗಿದೆ.