ಭಾರತ್ ಬಂದ್ ಪ್ರತಿಭಟನೆ ನಿರತ ಮಹಿಳೆಯೊಬ್ಬರು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕಾರವಾರ, (ಜ.8): ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಇಂದು (ಮಂಗಳವಾರ) ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಪ್ರತಿಭಟನೆ ಮೆರವಣಿಗೆ ವೇಳೆ ಅಂಗನವಾಡಿ ಸಹಾಯಕ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದಾರೆ.

Add Asianetnews Kannada as a Preferred SourcegooglePreferred

ಮೃತ ಮಹಿಳೆಯನ್ನು ಮುಂಡಗೋಡು ತಾಲೂಕಿನ ಶಿಡ್ಲಗುಂಡಿ ಗ್ರಾಮದ ಅಂಗನವಾಡಿ ಸಹಾಯಕಿ ಶಾಂತವ್ವ ಚಕ್ರಸಾಲಿ (57) ಎಂದು ಗುರುತಿಸಲಾಗಿದೆ.

ಬಂದ್ ಬಿಸಿ: ಯಾವೆಲ್ಲಾ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ? ಇಲ್ಲಿದೆ ಪಟ್ಟಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪಟ್ಟಣದ ತಾಲೂಕು ಪಂಚಾಯತಿ ಎದುರು ಮಂಗಳವಾರ ಪ್ರತಿಭಟನೆ ಮೆರವಣಿಗೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಶಾಂತವ್ವ ಏಕಾಏಕಿ ಕುಸಿದು ಬಿದ್ದಿದ್ದಾರೆ.

ಜನವರಿ 8 ಮತ್ತು 9 ಭಾರತ್‌ ಬಂದ್‌: ಏನಿರುತ್ತೆ, ಏನಿರಲ್ಲ? ಇಲ್ಲಿದೆ ಸಂಪೂರ್ಣ ಮಾಹಿತಿ

ಕೂಡಲೇ ಅವರನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ದುರದೃಷ್ಟವಶಾತ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.