ಬೆಳಗಾವಿ ಬದಲು ಬೆಳಗಾಂ ಎಂದು ಉಲ್ಲೇಖಿಸಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ ಕನ್ನಡಪರ ಸಂಘಟನೆಗಳು|ಬೆಳಗಾಂ ಎಂದೇ ಬರೆಯುತ್ತ ಹೋದರೆ ಇಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡಂತಾಗುತ್ತದೆ, ತಾವು ಗಡಿಭಾಗದ ಕನ್ನಡಿಗರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು: ಚಂದರಗಿ|  

ಬೆಳಗಾವಿ(ಡಿ.26): ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಸಮಿತಿ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಹೊರಡಿಸಿರುವ ಅಧಿಕೃತ ಪ್ರಕಟಣೆಯಲ್ಲಿ ಬೆಳಗಾವಿ ಬದಲು ಬೆಳಗಾಂ ಎಂದು ಉಲ್ಲೇಖಿಸಿರುವುದಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. 

Add Asianetnews Kannada as a Preferred SourcegooglePreferred

ಬೆಳಗಾವಿ ಜಿಲ್ಲಾ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಈ ಬಗ್ಗೆ ಬಹಿರಂಗ ಪತ್ರ ಬರೆದಿದ್ದಾರೆ. 

ರಮೇಶ್ ಜಾರಕಿಹೊಳಿಗೆ ಹೈಕಮಾಂಡ್ ವಾರ್ನಿಂಗ್: ಆದ್ರೂ ಸವಾಲು ಹಾಕಿದ ಸಾಹುಕಾರ

ಗಡಿಭಾಗದಲ್ಲಿ ಚುನಾವಣೆ ಎದುರಿಸಲು ಸನ್ನದ್ಧವಾಗಿರುವ ತಮ್ಮ ಪಕ್ಷವು ಈಗಲೇ ಬೆಳಗಾಂ ಎಂದು ಬರೆಯುವ ಮೂಲಕ ಮರಾಠಿಗರನ್ನು ಖುಷಿ ಪಡಿಸಿದರೆ ಹೇಗೆ? ಈ ವಿಷಯದಲ್ಲಿ ಸುಮ್ಮನೇ ಪ್ರತಿಷ್ಠೆ ಬೇಡ. ಬೆಳಗಾಂ ಎಂದೇ ಬರೆಯುತ್ತ ಹೋದರೆ ಇಲ್ಲದ ಸಮಸ್ಯೆಗಳನ್ನು ಮೈಮೇಲೆ ಎಳೆದುಕೊಂಡಂತಾಗುತ್ತದೆ. ತಾವು ಗಡಿಭಾಗದ ಕನ್ನಡಿಗರ ಭಾವನೆಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಅವರ ಬಹಿರಂಗಪತ್ರದಲ್ಲಿ ಹೇಳಿದ್ದಾರೆ.