* ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ನಡೆದ ಘಟನೆ* ಯುವಕನನ್ನು ಅಡ್ಡಗಟ್ಟಿ ಬೂಟು ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ಧದಿಂದ ನಿಂದಿಸಿದ್ದ ಎಎಸ್‌ಐ * ಬೂಟು ಕಾಲಿನಲ್ಲಿ ಒದ್ದು ವಿವಾದಕ್ಕೀಡಾಗಿದ್ದ ಪೊಲೀಸಪ್ಪ

ಕೊಳ್ಳೇಗಾಲ(ಜೂ.04): ಔಷಧ ತರಲು ಮೆಡಿಕಲ್‌ ಶಾಪ್‌ಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಬೂಟು ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ಧದಿಂದ ನಿಂದಿಸಿ ಅಶಿಸ್ತು ಪ್ರದರ್ಶಿಸಿದ್ದ ಕೊಳ್ಳೇಗಾಲ ಪಟ್ಟಣ ಠಾಣೆಯ ಎಎಸೈ ರಾಮಸ್ವಾಮಿ ಅವರನ್ನು ಎಸ್ಪಿ ದಿವ್ಯ ಸಾರಾ ಥಾಮಸ್‌ ಅಮಾನತುಗೊಳಿಸಿ ಆದೇಶಿಸಿದ್ದಾರೆ. 

Add Asianetnews Kannada as a Preferred SourcegooglePreferred

ಮೇ 23ರಂದು ಬೆಳಗ್ಗೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೋರ್ವನನ್ನು ತಡೆದ ರಾಮಸ್ವಾಮಿ, ಹೆಲ್ಮೆಟ್‌ ಹಾಕಿಲ್ಲ ಎಂದು ಪ್ರಶ್ನಿಸಿ ಆತನನ್ನು ನಿಂದಿಸಿ ಬೂಟು ಕಾಲಿನಲ್ಲಿ ಒದ್ದು ವಿವಾದಕ್ಕೀಡಾಗಿದ್ದರು.ಈ ಘಟನೆಯ ವಿಡಿಯೋ ವೈರಲ್‌ ಆಗಿತ್ತು.

ಚಾಮರಾಜನಗರ : ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ

ಈ ಕುರಿತು ಮೇ 24ರಂದು ಕನ್ನಡಪ್ರಭ ಯುವಕನ ಮೇಲೆ ಪೊಲೀಸ್‌ ಸಿಬ್ಬಂದಿ ದರ್ಪ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸಿತ್ತು.