ಹಾಸ್ಟೆಲ್ ವಿದ್ಯಾರ್ಥಿನಿಯರ ಬಳಿ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಸಸ್ಪೆಂಡ್ ಮಾಡಲಾಗಿದೆ.
ಕೊಡಗು (ಏ.10): ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ ತೋರಿದ ಆರೋಪದಡಿಯಲ್ಲಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಸಸ್ಪೆಂಡ್ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊಡಗು ಜಿಲ್ಲೆಯ ಪೊನ್ನಂಪೇಟೆ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ.ಮಲ್ಲಿಕಾರ್ಜುನ್ ಎಂಬಾತನನ್ನು ಅಮಾನತುಗೊಳಿಸಿ ಇಂದು ಕೊಡಗು ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
ವಿಜಯಪುರ: ನಂಬಿಸಿ ವಂಚನೆ, ಗೆಳತಿಯ ನಗ್ನ ಚಿತ್ರ ಹರಿಬಿಟ್ಟ ಯುವಕ .
ಪೊನ್ನಂಪೇಟೆಯಲ್ಲಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿರುವ ವಿದ್ಯಾರ್ಥಿನಿಯರ ಬಳಿ ಈತ ಅಸಭ್ಯವಾಗಿ ನಡೆದುಕೊಂಡಿದ್ದು ಈ ಸಂಬಂಧ ಜಿಲ್ಲಾ ಪಂಚಾಯತ್ ಸದಸ್ಯೆಗೆ ದೂರು ನೀಡಲಾಗಿತ್ತು.
ಇದೀಗ ವಿಸ್ತರಣಾಧಿಕಾರಿ ಮೇಲಿನ ಕಿರುಕುಳದ ಆರೋಪ ಸಾಬೀತಾದ ಹಿನ್ನೆಲೆ ಅಮಾನತುಗೊಳಿಸಿ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆದೇಶ ಹೊರಡಿಸಿದ್ದಾರೆ.
