*   ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಯೋಧ*   ಮರಾಠಾ ರೆಜಿಮೆಂಟ್ ಸೈನಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಯೋಧ ಚಿದಾನಂದ್*   ಯೋಧನ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ  

ಬಾಗಲಕೋಟೆ(ಸೆ.09): ಜಮ್ಮು-ಕಾಶ್ಮೀರದಲ್ಲಿ ಹಾವು ಕಚ್ಚಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಯೋಧನೊಬ್ಬ ಮೃತಪಟ್ಟಿದ್ದಾರೆ. ಚಿದಾನಂದ್ ಹಲಕುರ್ಕಿ(25) ಎಂಬುವರೇ ಕಾವು ಕಡಿತದಿಂದ ಸಾವನ್ನಪ್ಪಿದ ಯೋಧ.

ಮೃತಯೋಧ ಕಳೆದ 6 ವರ್ಷಗಳಿಂದ ಮರಾಠಾ ರೆಜಿಮೆಂಟ್ ಸೈನಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯದ ಮೇಲಿದ್ದಾಗ ಹಾವು ಕಚ್ಚಿದ ಪರಿಣಾಮ ಚಿದಾನಂದ್ ಸಾವನ್ನಪ್ಪಿದ್ದಾರೆ. 

ಬಾದಾಮಿ ಯೋಧ ಅಮೃತಸರದಲ್ಲಿ ಸಾವು

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಯೋಧ ಚಿದಾನಂದ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಯೋಧನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಜಮ್ಮು-ಕಾಶ್ಮೀರದಿಂದ ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಶನಿವಾರ ತಲುಪುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.