Asianet Suvarna News Asianet Suvarna News

ಭಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ ಸಾಗರ ಬಂದ್ ಗೆ ಕರೆ: ಆರೋಪಿ ಬಂಧನಕ್ಕೆ 3 ತಂಡ ರಚನೆ

ಭಜರಂಗದಳದ ಕಾರ್ಯಕರ್ತನೊಬ್ಬನ ಮೇಲೆ ಅನ್ಯಕೋಮಿನ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿರುವ  ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ  ಸಾಗರ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮಂಗಳವಾರ ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿದ್ದಾರೆ.

Bajrang Dal workers  called Sagar bandh for  Bajrang Dal worker Attempt to murder case gow
Author
First Published Jan 9, 2023, 4:23 PM IST

ಶಿವಮೊಗ್ಗ (ಜ.9): ಭಜರಂಗದಳದ ಕಾರ್ಯಕರ್ತನೊಬ್ಬನ ಮೇಲೆ ಅನ್ಯಕೋಮಿನ ಯುವಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ನಡೆಸಲು ಯತ್ನಿಸಿರುವ  ಘಟನೆ ಇಂದು ಸಾಗರ ಪಟ್ಟಣ ಬಿ.ಹೆಚ್ ರಸ್ತೆಯಲ್ಲಿ ನಡೆದಿದೆ. ಸಾಗರದ ನೆಹರು ನಗರ ನಿವಾಸಿ  ಸುನೀಲ್  ಬೈಕ್​ನಲ್ಲಿ ಬರುತ್ತಿದ್ದ ಆತನ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾನೆ.  ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ. 

ಘಟನೆಗೆ ಕಾರಣ: ಸುನೀಲ್ ಮತ್ತು ಸಮೀರ್ ಸಾಗರದ  ನೆಹರು ನಗರದ ನಿವಾಸಿಗಳು, ಹಳೇ  ವೈಷಮ್ಯದ ಹಿನ್ನಲೆಯಲ್ಲಿ ಈ  ಹಲ್ಲೆ ನಡೆದಿದೆ ಎಂದು ಹೇಳಲಾಗುತ್ತಿದೆ .ಈ ಘಟನೆ ಸಂಬಂಧ  ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Raichur: ಗ್ರಾಮ ಪಂಚಾಯತ್ ನಿರ್ಲಕ್ಷ್ಯಕ್ಕೆ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಬಲಿ!

ಎಸ್ಪಿ ಮಾಹಿತಿ: ಸಾಗರದ ಆಭರಣ ಜ್ಯುವೆಲರಿ ಸಮೀಪ ಬರುತ್ತಿದ್ದ ಸುನೀಲ್​ ಎಂಬಾತನ ಮೇಲೆ ಸಮೀರ್​ ಎಂಬಾತ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ತನ್ನ ಬೈಕ್​ನಿಂದ ಆಯುಧವನ್ನು ತೆಗೆದುಕೊಂಡು ಹಲ್ಲೆ ಮುಂದಾಗಿದ್ದಾನೆ. ಈ ಸಂಬಂಧ ಮೂರು ತಂಡಗಳನ್ನು ರಚಿಸಲಾಗಿದ್ದು, ಘಟನೆಗೆ ಕಾರಣ ತಿಳಿಯಲಾಗುತ್ತಿದೆ. ಇನ್ನೂ ಈ ಸಂಬಂದ ಒಂದು ಕೇಸ್​ ದಾಖಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ಮಾಹಿತಿ ನೀಡಿದ್ದಾರೆ.

Shivamogga: ಭಜರಂಗದಳ ಕಾರ್ಯಕರ್ತನ ಮೇಲೆ ಮುಸ್ಲಿಂ ಯುವಕನಿಂದ ತಲ್ವಾರ್ ಅಟ್ಯಾಕ್, ಜಸ್ಟ್ ಮಿಸ್!

ಸ್ವಯಂ ಘೋಷಿತ ಬಂದ್ ಗೆ ಕರೆ: ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನಿಸಿರುವ ಹಿನ್ನಲೆಯಲ್ಲಿ ಹಿಂದೂಪರ ಸಂಘಟನೆಗಳ ಮುಖಂಡರು,ಕಾರ್ಯಕರ್ತರು ಸಾಗರ ಟೌನ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಮಂಗಳವಾರ ಸ್ವಯಂ ಘೋಷಿತ ಬಂದ್ ಗೆ ಕರೆ ನೀಡಿದ್ದಾರೆ. ಹಲ್ಲೆಗೆ ಯತ್ನಿಸಿರುವ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.

Follow Us:
Download App:
  • android
  • ios