Asianet Suvarna News Asianet Suvarna News

ಕೊರೋನಾ 2ನೇ ಅಲೆ ಆರ್ಭಟ: ಇಂದಿನಿಂದ ಭಕ್ತರಿಗೆ ಮಂತ್ರಾಲಯ ರಾಯರ ದರ್ಶನ ನಿಷೇಧ

ಮಂತ್ರಾಲಯ ಮಠದಲ್ಲಿ ಭಕ್ತರಿಗೆ ಪ್ರವೇಶಕ್ಕೆ ಮತ್ತೆ ನಿಷೇಧ| ಆಂಧ್ರ ಪ್ರದೇಶದ ಕರ್ನೂಲ್‌ ಜಿಲ್ಲೆಯಲ್ಲಿರುವ ಮಂತ್ರಾಲಯ| ರಾಘವೇಂದ್ರ ಮಠದಲ್ಲಿ ಭಕ್ತರಿಗೆ ಪ್ರತ್ಯಕ್ಷ ದರ್ಶನ, ತೀರ್ಥಪ್ರಸಾದ ವ್ಯವಸ್ಥೆಗೆ ನಿಷೇಧ| ಮುಂದಿನ ಸೂಚನೆವರೆಗೆ ಭಕ್ತರು ಮಂತ್ರಾಲಯಕ್ಕೆ ಬರದಂತೆ ಮನವಿ| 

Ban on Entry for Devotees to Mantralaya Due to 2nd Wave of Coronavirus grg
Author
Bengaluru, First Published May 1, 2021, 10:54 AM IST

ರಾಯಚೂರು(ಮೇ.01): ದೇಶಾದ್ಯಂತ ಮಹಾಮಾರಿ ಕೊರೋನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡ 14 ದಿನಗಳ ಕಾಲ ಜನತಾ ಕರ್ಫ್ಯೂ ಜಾರಿಗೆ ತಂದಿದೆ. ಹೀಗಾಗಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮಂತ್ರಾಲಯ ಮಠದಲ್ಲಿ ಭಕ್ತರಿಗೆ ಪ್ರವೇಶಕ್ಕೆ ಮತ್ತೆ ನಿಷೇಧ ಹೇರಲಾಗಿದೆ.

ಈ ಸಂಬಂಧ ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀ ರಾಘವೇಂದ್ರಸ್ವಾಮಿ ಮಠದ ಆಡಳಿತ ಮಂಡಳಿಯ ಮಠದ ವ್ಯವಸ್ಥಾಪಕ ವೆಂಕಟೇಶ ಜೋಶಿ ಅವರು, ಇಂದಿನಿಂದ(ಮೇ1) ರಿಂದ ರಾಘವೇಂದ್ರ ಮಠದಲ್ಲಿ ಭಕ್ತರಿಗೆ ಪ್ರತ್ಯಕ್ಷ ದರ್ಶನ, ತೀರ್ಥಪ್ರಸಾದ ವ್ಯವಸ್ಥೆಯಿರುವುದಿಲ್ಲ ಎಂದು ತಿಳಿಸಿದೆ.

"

ಮಂತ್ರಾಲಯದ ಪೀಠಾಧಿಪತಿಗಳ ʼಆಪ್ತ ಕಾರ್ಯದರ್ಶಿ ಕೊರೋನಾಗೆ ಬಲಿ

ಮಂತ್ರಾಲಯದಲ್ಲಿ ಸ್ಥಳೀಯವಾಗಿ ಲಾಕ್‌ಡೌನ್ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಭಕ್ತರು ಆನ್‌ಲೈನ್ ಮೂಲಕ ಸೇವೆಯಲ್ಲಿ ಪಾಲ್ಗೊಳ್ಳಬಹುದಾಗಿದೆ. ಮುಂದಿನ ಸೂಚನೆವರೆಗೆ ಭಕ್ತರು ಮಂತ್ರಾಲಯಕ್ಕೆ ಬರದಂತೆ ವೆಂಕಟೇಶ ಜೋಶಿ ಅವರು ಮನವಿ ಮಾಡಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios