Asianet Suvarna News Asianet Suvarna News

ವಂಚಿಸಿದ ಯುವಕನ ಬೆನ್ನತ್ತಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಬಂದ ಯುವತಿ!

ಒಂದೇ ಆಫೀಸ್‌ನಲ್ಲಿದ್ದುಕೊಂಡು ತನಗೆ ವಂಚಿಸಿದ ಯುವಕನನ್ನು ಹುಡುಕಿಕೊಂಡು ಬೆಂಗಳೂರಿನ ಯುವತಿ ಬೆಳ್ತಂಗಡಿಗೆ ತಲುಪಿದ್ದಾರೆ. ಮೋಸ ಮಾಡಿದ ಯುವಕನೊಬ್ಬನನ್ನು ಹುಡುಕಿಕೊಂಡು ತಾಲೂಕಿನ ಕಕ್ಕಿಂಜೆಗೆ ಬಂದ ಕುತೂಹಲಕಾರಿ ಘಟನೆ ಸೋಮವಾರ ನಡೆದಿದೆ.

bangalore lady reaches Belthangady in search of man who cheats her
Author
Bangalore, First Published Jan 8, 2020, 2:15 PM IST

ಮಂಗಳೂರು(ಜ.08): ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಯುವತಿಯರಿಬ್ಬರು ತಮಗೆ ಮೋಸ ಮಾಡಿದ ಯುವಕನೊಬ್ಬನನ್ನು ಹುಡುಕಿಕೊಂಡು ತಾಲೂಕಿನ ಕಕ್ಕಿಂಜೆಗೆ ಬಂದ ಕುತೂಹಲಕಾರಿ ಘಟನೆ ಸೋಮವಾರ ನಡೆದಿದೆ.

ಬೆಳ್ತಂಗಡಿಯ ಕಕ್ಕಿಂಜೆಯ ಮುಸ್ಲಿಂ ಸಮುದಾಯದ ಯುವಕ ಹಾಗು ಸೊರಬದ ಹಿಂದೂ ಯುವತಿ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರೀರ್ವರ ಮಧ್ಯೆ ಗೆಳೆತನವಿತ್ತು. ಇದನ್ನು ದುರುಪಯೋಗಿಸಿಕೊಂಡ ಯುವಕ ಆಕೆಯ ಒಂದಿಷ್ಟುಹಣ, ಮೊಬೈಲ್‌ ತೆಗೆದುಕೊಂಡು ಪರಾರಿಯಾಗಿದ್ದ.

ಅನೈತಿಕ ಸಂಬಂಧ ?: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

ಆತನನ್ನು ಹುಡುಕಿಕೊಂಡು ಯುವತಿ ತನ್ನ ರಾಯಚೂರಿನ ಮುಸ್ಲಿಂ ಗೆಳತಿಯೊಂದಿಗೆ ಹಾಗು ಇನ್ನಿಬ್ಬರು ಮುಸ್ಲಿಂ ಯುವಕರೊಂದಿಗೆ ಕಾರಿನಲ್ಲಿ ಕಕ್ಕಿಂಜೆಗೆ ಬಂದಿದ್ದರು. ಆದರೆ ಹಣ ತೆಗೆದುಕೊಂಡ ಓಡಿ ಬಂದಾತ ಕಾಸರಗೋಡಿಗೆ ಪರಾರಿಯಾಗಿದ್ದ.

ಈ ಮಧ್ಯೆ ಕಾರನ್ನು ಮಸೀದಿಯೊಂದರ ಪಕ್ಕ ನಿಲ್ಲಿಸಿ ಯುವಕರಿಬ್ಬರು ಮಸೀದಿಗೆ ಸ್ವಚ್ಛತೆಗಾಗಿ ತೆರಳಿದ್ದರು. ಈ ಸಂದರ್ಭದಲ್ಲಿ ಸ್ಥಳೀಯರು ಕಾರಿನಲ್ಲಿದ್ದ ಯುವತಿಯರಲ್ಲಿ ಏನು ಎತ್ತ ಎಂದು ವಿವರಿಸಿದಾಗ ಯುವತಿಯೊಬ್ಬಳು ಉಡಾಫೆ ಮಾತನಾಡಿದ್ದಾಳೆ ಎನ್ನಲಾಗಿದೆ.

ನಿರ್ಭಯಾ ರೇಪಿಸ್ಟ್‌ಗಳಿಗೆ ಗಲ್ಲು, ಮಗಳನ್ನೇ ರೇಪ್‌ ಮಾಡಿದ ತಂದೆಗೆ ಜೀವಾವಧಿ ಶಿಕ್ಷೆ!

ಇದರಿಂದ ಕುಪಿತಗೊಂಡ ಸ್ಥಳೀಯರು ಪೋಲಿಸರಿಗೆ ಸುದ್ದಿ ಮುಟ್ಟಿಸಿದ್ದಾರೆ. ಇದೇ ವೇಳೆ ಈ ವಿಚಾರ ಹಿಂದೂ ಘಟನೆಯವರಿಗೆ ಗೊತ್ತಾಗಿ ಯುವಕರನ್ನು ವಿಚಾರಿಸಿಕೊಂಡಿದ್ದಾರೆ. ಬಳಿಕ ಪೋಲಿಸರು ನಾಲ್ವರನ್ನು ಠಾಣೆಗೆ ಕರೆಯಿಸಿ ಬುದ್ಧಿವಾದ ಹೇಳಿದ್ದಾರೆ. ಮಂಗಳವಾರ ಬೆಳಗ್ಗೆ ಹೆತ್ತವರು ಯುವತಿಯರನ್ನು ಕರೆದುಕೊಂಡು ಹೋಗಿದ್ದಾರೆ.

Follow Us:
Download App:
  • android
  • ios