ಬೆಂಗಳೂರು ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗ 1974ರಲ್ಲಿ ಸ್ಥಾಪಿತವಾಗಿದ್ದು, 50 ವರ್ಷ ಪೂರೈಸಿದ ಹಿನ್ನೆಲೆ ಜ್ಞಾನಭಾರತಿ ಆವರಣದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಬೆಂಗಳೂರು (ಫೆ.28): ಬೆಂಗಳೂರು ವಿಶ್ವವಿದ್ಯಾಲಯದ ಮನೋವಿಜ್ಞಾನ ವಿಭಾಗ 1974ರಲ್ಲಿ ಸ್ಥಾಪಿತವಾಗಿದ್ದು, 50 ವರ್ಷ ಪೂರೈಸಿದ ಹಿನ್ನೆಲೆ ಜ್ಞಾನಭಾರತಿ ಆವರಣದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್‌ ಗುಂಡೂರಾವ್ ಸುವರ್ಣ ಮಹೋತ್ಸವ ಕಾರ್ಯಕ್ರಮ ಮತ್ತು ಹಳೆಯ ವಿದ್ಯಾರ್ಥಿಗಳ ಸಂಘವನ್ನು ಉದ್ಘಾಟಿಸಲಿದ್ದಾರೆ. ಹಾಗೂ ಭವಿಷ್ಯದ ಮನೋವಿಜ್ಞಾನ: ಪ್ರಗತಿಗಳು, ಸವಾಲುಗಳು ಮತ್ತು ಅವಕಾಶಗಳು ಕುರಿತು ವಿಷಯತಜ್ಞರು ಚರ್ಚೆ ನಡೆಸಲಿದ್ದಾರೆ. ಜತೆಗೆ ಮನೋವಿಜ್ಞಾನ ವಿಭಾಗದಲ್ಲಿ ಸೇವೆ ಸಲ್ಲಿಸಿದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗೆ ಸನ್ಮಾನಿಸಲಾಗುವುದು.

Add Asianetnews Kannada as a Preferred SourcegooglePreferred

ಎಐಯಿಂದ ಭವಿಷ್ಯದಲ್ಲಿ ಕ್ರಾಂತಿ ಸೃಷ್ಟಿ: ಕೃತಕ ಬುದ್ದಿಮತ್ತೆ (ಎಐ) ಮಾನವಕುಲಕ್ಕೆ ಪೂರಕವೇ ಹೊರತು ಮಾರಕವಲ್ಲ. ಇದರಿಂದ ಮತ್ತಷ್ಟು ಜ್ಞಾನಸಂಪಾದನೆ ಸಾಧ್ಯ. ಭವಿಷ್ಯದಲ್ಲಿ ಮತ್ತಷ್ಟು ಕ್ರಾಂತಿ ಸೃಷ್ಟಿಸಲಿದೆ ಎಂದು ವಿಶ್ರಾಂತ ಕುಲಪತಿ ಡಾ.ಕೆ.ಆರ್‌. ವೇಣುಗೋಪಾಲ್‌ ಅಭಿಪ್ರಾಯಪಟ್ಟರು. ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗ ಆಯೋಜಿಸಿದ್ದ ‘ಡಿಜಿಟಲ್‌ ಲ್ಯಾಂಡ್‌ಸ್ಕೇಪ್‌ ಇನ್‌ ಲ್ರೈಬ್ರರಿ’ ಕುರಿತ 3 ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆಯು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದಲ್ಲಿ ಬೃಹತ್‌ ಕ್ರಾಂತಿ ತಂದಿದೆ. 

ಪುರಾತನ ಲಿಪಿಗಳು, ಗ್ರಂಥಗಳು, ಪುಸ್ತಕಗಳು ಮತ್ತು ಮಾಹಿತಿಗಳನ್ನುಎಐ ಚಾಲಿತ ಸಾಧನಗಳನ್ನು ಬಳಸಿ ಪುನರ್‌ಸ್ಥಾಪಿಸಲಾಗುತ್ತಿದೆ. ಸ್ಮಾರ್ಟ್ ಗ್ರಂಥಾಲಯಗಳು ಹೆಚ್ಚಾಗುತ್ತಿದೆ. ಚಾಟ್‌ ಜಿಪಿಟಿ ಬೆರಳತುದಿಯಲ್ಲೆ ಎಲ್ಲದಕ್ಕೂ ಉತ್ತರಿಸುತ್ತದೆ. ಎಐ ವಿಶ್ವದ ಎಲ್ಲ ಭಾಷೆಗಳನ್ನು ಒಳಗೊಂಡಂತೆ 7000ಕ್ಕಿಂತ ಹೆಚ್ಚು ಪದಗಳನ್ನು ಹೊಂದಿದೆ. ಯಾವುದೇ ಪ್ರಶ್ನೆಗೆ ಕ್ಷಣಮಾತ್ರದಲ್ಲೇ ನಿಖರವಾದ ಉತ್ತರಗಳನ್ನು ನೀಡುತ್ತದೆ ಎಂದರು.

ಮನಮೋಹನ್ ಸಿಂಗ್ ಹೆಸರಲ್ಲಿ ಬೆಂ.ವಿವಿಯಲ್ಲಿ ಸಂಶೋಧನಾ ಕೇಂದ್ರ ಸ್ಥಾಪಿಸಿ: ಡಿ‌.ಕೆ.ಶಿವಕುಮಾರ್

ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ಕ್ಷೇತ್ರದಲ್ಲಿನ ಕೊಡುಗೆ ಮತ್ತು ಸಾಧನೆಗಳಿಗಾಗಿ ಇದೇ ವೇಳೆ ಪ್ರೊ‌.ಎಂ.ರಘುನಂದನ ಅವರಿಗೆ ಸೊಸೈಟ್ ಫಾರ್ ಲ್ರೈಬ್ರರಿ ಪ್ರೊಫೆಷನಲ್ಸ್ ವತಿಯಿಂದ ‘ರಿಸರ್ಚ್‌ ಎಕ್ಸಲೆನ್ಸಿ ಅವಾರ್ಡ್‌’ ಪ್ರದಾನ ಮಾಡಲಾಯಿತು. ಬೆಂಗಳೂರು ವಿವಿ ಕುಲಪತಿ ಡಾ.ಎಸ್‌.ಎಂ. ಜಯಕರ, ಕುಲಸಚಿವರು ಶೇಕ್ ಲತೀಫ್, ದಾವಣಗೆರೆ ವಿವಿ ಕುಲಪತಿ ಬಿ‌.ಡಿ.ಕುಂಬಾರ್, ಇನ್ಫ್‌ಲಿಬ್‌ನೆಟ್ ನಿರ್ದೇಶಕ ಡಾ.ದೇವಿಕಾ ಪಿ. ಮಾಡಳ್ಳಿ, ಪ್ರೊ.ಜೋಸೆಫ್‌ ಯಪ್, ಎಂ.ಪಿ.ಸಿಂಗ್ ಸೇರಿ ದೇಶದ 10ಕ್ಕೂ ಹೆಚ್ಚು ವಿವಿಗಳ ಗ್ರಂಥಪಾಲಕರು, ವಿದ್ಯಾರ್ಥಿಗಳು ಭಾಗಿಯಾಗಿದ್ದರು.