Asianet Suvarna News Asianet Suvarna News

ಬೆಂಗಳೂರನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಿದ್ದು ಕೆಂಪೇಗೌಡರು - ಡಾ. ಜಿ. ಪರಮೇಶ್ವರ್‌

  • ಬೆಂಗಳೂರನ್ನು ಅಚ್ಚುಕಟ್ಟಾಗಿ ನಿರ್ಮಾಣ ಮಾಡಿದ್ದು ಕೆಂಪೇಗೌಡರು
  • ಆರ್ಥಿಕತೆಗೆ ಶಕ್ತಿ ನೀಡಿದ ಬೆಂಗಳೂರು
  • ಕೆಂಪೇಗೌಡರು ಒಂದು ಜನಾಂಗಕ್ಕೆ ಸೀಮಿತವಾದ ವ್ಯಕ್ತಿಯಲ್ಲ: ಶಾಸಕ ಪರಮೇಶ್ವರ್‌
Bangalore was built neatly by Kempegowda says dr g parameshwar rav
Author
First Published Sep 12, 2022, 7:24 AM IST

ಹೊಳವನಹಳ್ಳಿ (ಸೆ.12) : ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಗರವನ್ನು ಅಚ್ಚುಕಟ್ಟಾಗಿ ಮತ್ತು ಮುಂದಾಲೋಚನೆಯಾಗಿ ನಿರ್ಮಾಣ ಮಾಡಿ ರಾಜ್ಯದ ಆರ್ಥಿಕತೆಗೆ ಶಕ್ತಿ ನೀಡಿ ದೇಶಕ್ಕೆ ಮತ್ತು ಪ್ರಪಂಚಕ್ಕೆ ಮಾದರಿಯಾಗಿದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ. ಜಿ. ಪರಮೇಶ್ವರ್‌ ತಿಳಿಸಿದರು. ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಾಗೂ ಡಾ.ಜಿ.ಪರಮೇಶ್ವರ ಅವರ ಹುಟ್ಟು ಹಬ್ಬ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೆಂಪೇಗೌಡರು ಒಂದು ಜನಾಂಗಕ್ಕೆ ಸೀಮಿತವಾದ ವ್ಯಕ್ತಿಯಲ್ಲ. ಅವರ ಶ್ರಮ ಮತ್ತು ಕರ್ತವ್ಯ ನಿಷ್ಟೆಯಿಂದ ಎಲ್ಲಾ ವರ್ಗದ ಜನರು ನೆಮ್ಮದಿಯಾಗಿ ರಾಜ್ಯದ ರಾಜಧಾನಿಯಾದ ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಳ್ಳುವಂತಾಗಿದೆ. ಎಂದರು.

ಸಂವಿಧಾನ ಆಶಯಗಳನ್ನು ಇನ್ನೂ ಈಡೇರಿಸಿಲ್ಲ:ಡಾ. ಪರಮೇಶ್ವರ್‌

ಇಂದಿನ ತಂತ್ರಜ್ಞಾನವನ್ನು ಕೆಂಪೇಗೌಡರು ಅಂದೇ ಆಲೋಚಿಸಿ ಜನರ ವಾಣಿಜ್ಯ ವ್ಯವಹಾರಗಳಿಗೆ ವಿವಿಧ ಪೇಟೆಗಳನ್ನು, ಕೃಷಿಕರಿಗೆ ಮಾರುಕಟ್ಟೆಗಳನ್ನು ಜನವಸತಿ ಕೇಂದ್ರಗಳನ್ನು ನಿರ್ಮಿಸಿದರು. ಇದರೊಂದಿಗೆ ಹಲವು ಕೆರೆಕಟ್ಟೆಗಳು, ನಾಲೆಗಳನ್ನು ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ನಿರ್ಮಾಣ ಮಾಡಿ, ಸದೃಢ ಬೆಂಗಳೂರನ್ನು ರಚಿಸಿದರು. ಅಂತಹ ಮಹಾನ್‌ ವ್ಯಕ್ತಿಯ ಶ್ರಮದಿಂದ ಬೆಂಗಳೂರಿನಲ್ಲಿ ಪ್ರಪಂಚದ ಎಲ್ಲಾ ಐಟಿ, ಬಿಟಿ ಕಂಪನಿಗಳು ವಿವಿಧ ವಾಣಿಜ್ಯ ಕಂಪನಿಗಳು ಬಂದು ರಾಜ್ಯಕ್ಕೆ ಆರ್ಥಿಕ ಶಕ್ತಿಯನ್ನು ನೀಡುತ್ತಿವೆ. ಬೆಂಗಳೂರಿನಲ್ಲಿ ಇಂದು ಸುಮಾರು 1.30 ಕೋಟಿ ಎಲ್ಲ ವರ್ಗ, ಭಾಷೆ ಜನರು ವಾಸಿಸುತ್ತಿದ್ದಾರೆ. ಭಾರತೀಯ ಸೇನೆ ವಿಶ್ವದ ಬಲಿಷ್ಟಸೇನೆಗಳಲ್ಲಿ ಒಂದಾಗಿದೆ. ಸ್ವತಂತ್ರ ನಂತರ ಕಡು ಬಡತನದಲ್ಲಿದ್ದು, ಮೂಲಭೂತ ಸೌಕರ್ಯಗಳಿಲ್ಲದೇ ಆರ್ಥಿಕತೆ, ಸಾಕ್ಷರತೆ, ನೀರಾವರಿ ಯೋಜನೆಗಳಿಲ್ಲದೇ ಸೊರಗುತ್ತಿದ್ದ ದೇಶವನ್ನು ಕಾಂಗ್ರೆಸ್‌ ಪಕ್ಷವು ಅಂತಹ ಸಂದರ್ಭದಲ್ಲಿ ಅಧಿ​ಕಾರಕ್ಕೆ ಬಂದು ಬಹಳಷ್ಟುಶ್ರಮವಹಿಸಿ ದೇಶವನ್ನು ಬಲಿಷ್ಟಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದೆ. ದೇಶದ ಎಲ್ಲಾ ಧರ್ಮ, ಜಾತಿ ಜನರು ಒಟ್ಟು ಇರಬೇಕಾದರೆ ಕಾಂಗ್ರೆಸ್‌ ಪಕ್ಷದ ಜಾತ್ಯತೀತ ತತ್ವ ಮುಖ್ಯ ಕಾರಣವಾಗಿದೆ. ಅಂತಹ ಪಕ್ಷವನ್ನು ಹಲವರು ಟೀಕಿಸುತ್ತಿದ್ದಾರೆ. ಆದರೆ ಜನರಿಗೆ ಕಾಂಗ್ರೆಸ್‌ ಪಕ್ಷದ ತ್ಯಾಗ, ಬಲಿದಾನ ತಿಳಿದಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ವಾಲೆ ಚಂದ್ರಯ್ಯ, ಆರ್‌.ಎಸ್‌.ರಾಜಣ್ಣ, ಸುರೇಶ, ವೆಂಕಟೇಶಮೂರ್ತಿ, ಕೆಂಪಣ್ಣ, ಪಂಚಾಕ್ಷರಯ್ಯ, ಬಿಎಂಸಿ ಚಂದ್ರು, ಕಾಂಗ್ರೆಸ್‌ ಮಹಿಳಾ ಅಧ್ಯಕ್ಷೆ ಜಯಮ್ಮ, ಶೈಲಜ, ಕವಿತಾ, ಗ್ರಾಪಂ. ಸದಸ್ಯರಾದ ಅಶ್ವತ್‌್ಥ, ಸುರೇಶ್‌, ದೇವರಾಜು, ಪಂಚಾಕ್ಷರಯ್ಯ, ಸತ್ಯಣ್ಣ, ಕೃಷ್ಣಪ್ಪ ಇತರರು ಇದ್ದರು.

ಸಾಕು ಪ್ರಾಣಿಗಳ ಆರೋಗ್ಯಕ್ಕಾಗಿ ಆಸ್ಪತ್ರೆಗಳು ಅವಶ್ಯಕ: ಪರಮೇಶ್ವರ್‌

ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಕೆಂಪೇಗೌಡರ ಜಯಂತಿ ಆಚರಿಸುವುದು ಪ್ರತಿಯೊಬ್ಬ ಕನ್ನಡಿಗರ ಕರ್ತವ್ಯವಾಗಿದೆ. ಕೆಂಪೇಗೌಡರು ನಾಡು ಕಂಡಂತಹ ಅಪರೂಪದ ಶ್ರಮ ಜೀವಿಯಾಗಿದ್ದಾರೆ. ಅವರ ಅಂದಿನ ಶ್ರಮದಿಂದ ರಾಜ್ಯದ ರಾಜಧಾನಿ ಬೃಹತ್‌ ಬೆಂಗಳೂರು ನಗರವಾಗಿ ಬೆಳೆದಿದೆ. ಜನರ ಸೇವೆಗಾಗಿ ಹಗಲಿರುಳು ಶ್ರಮ ವಹಿಸಿದ ಮಹಾನ್‌ ವ್ಯಕ್ತಿ ಕೆಂಪೇಗೌಡರಾಗಿದ್ದಾರೆ. ಅವರ ನೆನಪು ಸದಾ ಎಲ್ಲರಲ್ಲೂ ಇರಬೇಕಿದೆ.

ವೀರಭದ್ರ ಶಿವಾಚಾರ್ಯ ಸ್ವಾಮೀಜಿ

Follow Us:
Download App:
  • android
  • ios