2014 ರಲ್ಲಿ ಕಾವೇರಿ ನೀರಿನ ದರ ಬೆಂಗಳೂರು ನಗರದಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಕಳೆದ ಹತ್ತು ವರ್ಷದಿಂದ ನೀರಿನ ದರ ಪರಿಷ್ಕರಣೆ ಮಾಡಿರಲಿಲ್ಲ. ಹೀಗಾಗಿ ಜಲಮಂಡಳಿ ಹಿತದೃಷ್ಟಿಯಿಂದ ನೀರಿನ ದರ ಪರಿಷ್ಕರಣೆ ಮಾಡುತ್ತೇವೆ ಎಂದ ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್

ಬೆಂಗಳೂರು(ಅ.12): ಶೀಘ್ರದಲ್ಲೇ ಕಾವೇರಿ ನೀರಿನ ದರ ಪರಿಷ್ಕರಣೆಯಾಗಲಿದೆ. ಹೌದು, ಕಾವೇರಿ ನೀರಿನ ದರ ಹೆಚ್ಚಳಕ್ಕೆ ಬೆಂಗಳೂರು ಜಲಮಂಡಳಿ ಸಿದ್ಧತೆ ಮಾಡಿಕೊಂಡಿದೆ. ರಾಜಧಾನಿ ಜನರಿಗೆ ಹೊರೆಯಾಗದಂತೆ ನೀರಿನ ದರ ಏರಿಕೆ ಮಾಡಲಿದೆಯಂತೆ ಬೆಂಗಳೂರು ಜಲಮಂಡಳಿ. 

Add Asianetnews Kannada as a Preferred SourcegooglePreferred

ಈಗಾಗಲೇ ಬೆಂಗಳೂರು ಜನರ ಅಭಿಪ್ರಾಯವನ್ನ ಜಲಮಂಡಳಿ ಸಂಗ್ರಹ ಮಾಡಿಕೊಂಡಿದೆ. ನೀರಿನ ದರ ಪರಿಷ್ಕರಣೆ ಸಂಬಂಧ ಸಾರ್ವಜನಿಕ ಆಕ್ಷೇಪಣೆಗೆ ಈ ಬಾರಿ ಅವಕಾಶ ನೀಡಲಾಗಿತ್ತು. ಗೃಹ, ಗೃಹೇತರರ ನೀರಿನ ಬಳಕೆದಾರರು, ಹೋಟೆಲ್, ಅಪಾರ್ಟ್ಮೆಂಟ್ ಅಸೋಸಿಯೇಷನ್ ಜೊತೆ ಸಭೆ ನಡೆಸಲಾಗಿದ್ದು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನೀರಿನ ದರ ಪರಿಷ್ಕರಣೆ ಮಾಡಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. 

ಬೆಂಗಳೂರಿಗರಿಗೆ ಶಾಕ್: ಗಣೇಶ ಹಬ್ಬಕ್ಕೂ ಮುನ್ನ ಕಾವೇರಿ ನೀರಿನ ದರ ಏರಿಕೆ?

2014 ರಲ್ಲಿ ಕಾವೇರಿ ನೀರಿನ ದರ ಬೆಂಗಳೂರು ನಗರದಲ್ಲಿ ಪರಿಷ್ಕರಣೆ ಮಾಡಲಾಗಿತ್ತು. ಕಳೆದ ಹತ್ತು ವರ್ಷದಿಂದ ನೀರಿನ ದರ ಪರಿಷ್ಕರಣೆ ಮಾಡಿರಲಿಲ್ಲ. ಹೀಗಾಗಿ ಜಲಮಂಡಳಿ ಹಿತದೃಷ್ಟಿಯಿಂದ ನೀರಿನ ದರ ಪರಿಷ್ಕರಣೆ ಮಾಡುತ್ತೇವೆ ಎಂದು ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.