ಸಿಎಂಗೆ ಎರಡು ದಿನದ ಗಡುವು | ಬೆಂಗಳೂರಿಗೆ ಪಾದಯಾತ್ರೆ
ಬಾಗಲಕೋಟೆ(ಜ.12): ಎರಡು ದಿನದಲ್ಲಿ ಸಿಎಂ ಯಡಿಯೂರಪ್ಪ ತಮ್ಮ ನಿಲುವು ತಿಳಿಸಿ ಸ್ಪಂದಿಸಿದಿದ್ದರೆ ಪಾದಯಾತ್ರೆ ನಡೆಸುವುದಾಗಿ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಪಂಚಮಸಾಲಿ 2 ಎ ಮೀಸಲಾತಿ ಪಾದಯಾತ್ರೆ ಹೋರಾಟ ವಿಚಾರವಾಗಿ ಬಾಗಲಕೋಟೆಯಲ್ಲಿ ಮಾತನಾಡಿದ್ದಾರೆ.
Add Asianetnews Kannada as a Preferred Source

ಸರ್ಕಾರ ಸ್ಪಂದಿಸಿದರೆ ಅಭಿನಂದಿಸಿ ವಿಜಯೋತ್ಸವ ಮಾಡುತ್ತೇವೆ. ಸ್ಪಂದನೆ ಇರದಿದ್ದರೆ ಕೂಡಲಸಂಗಮದಿಂದ ಜ. 14ರಿಂದ ಬೃಹತ್ ಪಾದಯಾತ್ರೆ ಮಾಡುತ್ತೇವೆ. ಕೂಡಲಸಂಗಮದಿಂದ ಇಲಕಲ್, ಕೊಪ್ಪಳ, ಹಗರಿಬೊಮ್ಮನಹಳ್ಳಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಬೆಂಗಳೂರಿಗೆ ಪಾದಯಾತ್ರೆ ನಡೆಯಲಿದೆ.
ಪಂಚಮಸಾಲಿ ಮೀಸಲಾತಿ: 'ಸಿಎಂಗೆ ನೀಡಿರುವ ಗಡುವು ಮುಗಿದಿದೆ, ಏನಾದರೂ ಆದರೆ ಸರ್ಕಾರ ಹೊಣೆ'
ಅಧಿವೇಶನ ನಡೆಯೋ ವೇಳೆ ಬೆಂಗಳೂರು ತಲುಪಿ ವಿಧಾನಸೌಧ ಮುತ್ತಿಗೆಗೆ ನಿರ್ಧಾರ ಮಾಡಲಾಗಿದೆ. ಬಳಿಕ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಸಹ ನಿರ್ಧರಿಸಲಾಗಿದೆ ಎಂದಿದ್ದಾರೆ.
