ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ನನೆಗುದಿಗೆ ಬಿದ್ದಿರುವ ಯೋಜನೆಗಳ ಜಾರಿಗೆ ಧ್ವನಿ ಎತ್ತಲಾಗುವುದು| ಬೆಳಗಾವಿ ಸುವರ್ಣ ಸೌಧಕ್ಕೆ ರಾಜ್ಯಮಟ್ಟದ ಕೆಲ ಕಚೇರಿಗಳನ್ನು ಸ್ಥಳಾಂತರಿಸಬೇಕಿತ್ತು. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ಇಲ್ಲಿನ ಕಚೇರಿಗಳನ್ನು ಸ್ಥಳಾಂತರಿಸಲು ಮುಂದಾಗಿದೆ. ಈ ಬಗ್ಗೆ ಚರ್ಚಿಸಲಾಗುವುದು| 

ಹುಬ್ಬಳ್ಳಿ(ಸೆ.20): ಮುಂಗಾರು ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತಂತೆ ಚರ್ಚಿಸುತ್ತೇನೆ. ಸುವರ್ಣ ವಿಧಾನಸೌಧಕ್ಕೆ ಕಚೇರಿಗಳ ಸ್ಥಳಾಂತರ ಕುರಿತು ಪ್ರಸ್ತಾಪಿಸಲಾಗುವುದು ಎಂದು ವಿಧಾನ ಪರಿಷತ್‌ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು, ನನೆಗುದಿಗೆ ಬಿದ್ದಿರುವ ಯೋಜನೆಗಳ ಜಾರಿಗೆ ಧ್ವನಿ ಎತ್ತಲಾಗುವುದು. ಬೆಳಗಾವಿ ಸುವರ್ಣ ಸೌಧಕ್ಕೆ ರಾಜ್ಯಮಟ್ಟದ ಕೆಲ ಕಚೇರಿಗಳನ್ನು ಸ್ಥಳಾಂತರಿಸಬೇಕಿತ್ತು. ಆದರೆ ಸರ್ಕಾರ ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿಲ್ಲ. ಇಲ್ಲಿನ ಕಚೇರಿಗಳನ್ನು ಸ್ಥಳಾಂತರಿಸಲು ಮುಂದಾಗಿದೆ. ಈ ಬಗ್ಗೆ ಚರ್ಚಿಸಲಾಗುವುದು. ಈ ಕುರಿತಂತೆ ಈಗಾಗಲೇ ತಮ್ಮ ನಾಯಕರ ಜತೆಗೆ ಚರ್ಚೆ ಮಾಡಿದ್ದು, ಸದನದಲ್ಲಿ ಒಗ್ಗಟ್ಟು ಪ್ರದರ್ಶಿಸಲಾಗುವುದು ಎಂದರು.

ಅನುದಾನಿತ ಶಾಲೆಗಳಲ್ಲಿ ಸಾವಿರಾರು ಶಿಕ್ಷಕರ ಹುದ್ದೆಗಳು ಖಾಲಿ!

ಇನ್ನೂ ಶಿಕ್ಷಕರಿಗೆ ಮಾರಕವಾಗಿರುವ ವಿದ್ಯಾಗಮ ಯೋಜನೆಯ ಸಾಧಕ-ಬಾಧಕ, ಅನುದಾನಿತ ಖಾಸಗಿ ಶಾಲಾ ಶಿಕ್ಷಕರ ಬೇಡಿಕೆ ಸೇರಿದಂಥೆ ಮತ್ತಿತರರ ವಿಷಯಗಳ ಕುರಿತು ಸೆ. 21ರಿಂದ ನಡೆಯಲಿರುವ ಅಧಿವೇಶನದಲ್ಲಿ ಸುದೀರ್ಘ ಚರ್ಚೆಗೆ ಒತ್ತಾಯಿಸುತ್ತೇನೆ ಎಂದು ನುಡಿದರು.