ನಾವು ಹೊರಗಿದ್ರು ಗೆಲ್ತೀವಿ. ಒಳಗಿದ್ರು ಗೆಲ್ತೀವಿ ಎಂದು ಬಿಜೆಪಿ ಶಾಸಕರೋರ್ವರು ಹೇಳಿದ್ದು ಇದರಿಂದ ದೂರ ಸರಿಯುವ ಮುನ್ಸೂಚನೆ ನೀಡಿದರಾ ಎನ್ನುವ ಅನುಮಾನ ಮೂಡಿದೆ. 

 ಚಿತ್ರದುರ್ಗ (ಫೆ.03): ‘ಸಿಎಂ ಊಟ, ನಾಷ್ಟಾ ಮಾಡಿಸುವುದರಿಂದ ನಮ್ಮ ಬೇಡಿಕೆ ಈಡೇರಲ್ಲ. ನಾವು ಶಾಸಕರು, ಸಂಸದರು ಹೇಗೆ ಆಗಬೇಕೆಂದು ನಮಗೆ ಗೊತ್ತಿದೆ. 

Add Asianetnews Kannada as a Preferred SourcegooglePreferred

ನಮ್ಮನ್ನು ಹೊರಗೆ ಹಾಕಿದ್ರೂ ಆಗ್ತೀವಿ, ಪಕ್ಷದೊಳಗಿದ್ದರೂ ಗೆಲ್ತೀವಿ’ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಟಾಂಗ್‌ ನೀಡಿದ್ದಾರೆ. 

ವಿಧಾನಸಭೆ ಕಲಾಪದಲ್ಲಿ ಪ್ರತಿಧ್ವನಿಸಿದ ST, 2A ಮೀಸಲಾತಿ ಹೋರಾಟ: ಬಿಎಸ್‌ವೈ ಗಪ್‌-ಚುಪ್ ...

ನಗರದಲ್ಲಿ ಮಂಗಳವಾರ ಪಂಚಮಸಾಲಿ 2ಎ ಹೋರಾಟದ ಸಮಾವೇಶದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗಲಿದೆ. ಪಂಚಮಸಾಲಿ ಶ್ರೀಗಳು ಪಾದಯಾತ್ರೆ ಮಾಡಿದರೂ, ಸಿಎಂ ಮಾತನಾಡಿಲ್ಲ. 

ಈ ಬಗ್ಗೆ ನಾವು ಸದನದಲ್ಲಿ ಪ್ರಸ್ತಾಪಿಸಿದ ಬಳಿಕ ಸಭೆ ಕರೆದರು ಎಂದರು.