* ಚಿತಾಗಾರಗಳಲ್ಲಿ ಅಂತ್ಯ ಸಂಸ್ಕಾರಕ್ಕೆ ಸಮಸ್ಯೆ ಹಿನ್ನಲೆ* ಬಿಬಿಎಂಪಿಯಿಂದ 24 ಗಂಟೆಯೂ  ಚಿತಾಗಾರ ಸೇವೆ * ಗೌರವ ಪೂರ್ವಕ ಅಂತ್ಯ ಸಂಸ್ಕಾರಕ್ಕಾಗಿ ಸಹಾಯವಾಣಿ ಪ್ರಕಟಿಸಿದ ಬಿಬಿಎಂಪಿ

ಬೆಂಗಳೂರು, (ಮೇ.12): ಕೊರೋನಾ ಎರಡನೇ ಅಲೆ ಅತ್ಯಂತ ವೇಗವಾಗಿ ಹರಡುತ್ತಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. 

Add Asianetnews Kannada as a Preferred SourcegooglePreferred

ಸೂಕ್ತ ಸಮಯಕ್ಕೆ ಆಕ್ಸಿಜನ್, ಬೆಡ್ ಹಾಗೂ ಔಷಧಿ ಸಿಗದೇ ಸಾವಿನ ಸಂಖ್ಯೆ ಕೂಡ ಹೆಚ್ಚಾಗಿದ್ದು, ಮೃತಪಟ್ಟವರ ಅಂತ್ಯಕ್ರಿಯೆಗೂ ಚಿತಾಗಾರ ಸಮಸ್ಯೆ ಎದುರಾಗಿದೆ.

ಬೆಂಗ್ಳೂರಲ್ಲಿ ಕಂಟ್ರೋಲ್‌ ತಪ್ಪಿದ ಕೊರೋನಾ: ಈ ದೃಶ್ಯ ನೋಡಿದ್ರೆ ನಿಮ್ಮ ಎದೆ ನಡುಗುತ್ತೆ..!

ಬೆಂಗಳೂರಿನಲ್ಲಿ ಈಗಾಗಲೇ ಸೋಂಕಿನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಸೂಕ್ತ ಜಾಗದ ವ್ಯವಸ್ಥೆ ಮಾಡಿದೆ. ಈಗ ಬಿಬಿಎಂಪಿಯಿಂದ 24 ಗಂಟೆಯೂ ಚಿತಾಗಾರ ಸೇವೆ ಇರಲಿದೆ.

ಕೋವಿಡ್-19 ಮತ್ತು ಇನ್ನಿತರ ಕಾರಣಗಳಿಂದ ಮೃತಪಟ್ಟವರ ಗೌರವ ಪೂರ್ವಕ ಅಂತ್ಯ ಸಂಸ್ಕಾರಕ್ಕಾಗಿ ಬಿಬಿಎಂಪಿ ಸಹಾಯವಾಣಿ ಪ್ರಕಟಿಸಿದ್ದು, ಅಂತ್ಯಸಂಸ್ಕಾರ ಮಾಡಲು ಏನಾದ್ರೂ ಸಮಸ್ಯೆ ಎದುರಾದ್ರೆ, 8495998495 ಈ ಸಹಾಯವಾಣಿ ಸಂಖ್ಯೆಗೆ ಕರೆಮಾಡಬಹುದು ಎಂದು ಬಿಬಿಎಂಪಿ ತಿಳಿಸಿದೆ.