ಮತ್ತೆ ಮುಂದೂಡಿಕೆಯಾಯ್ತು ಚುನಾವಣೆ : ಯಾವಾಗ ನಡೆಯುತ್ತೆ?
ಇದೇ ತಿಂಗಳು ನಡೆಯಬೇಕಿದ್ದ ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ. ಇದೀಗ ಎರಡನೇ ಬಾರಿ ಚುನಾವಣೆ ಮುಂದೆ ಹೋದಂತಾಗಿದೆ.
ಬೆಂಗಳೂರು [ಡಿ.30]: ಡಿಸೆಂಬರ್ 30 ರಂದು ನಿಗದಿಯಾಗಿದ್ದ ಬಿಬಿಎಂಪಿ 12 ಸ್ಥಾಯಿ ಸಮಿತಿಗಳ ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ. ಇದೀಗ ಎರಡನೇ ಬಾರಿ ಚುನಾವಣೆ ಮುಂದೂಡಿಕೆಯಾದಂತಾಗಿದೆ.
ಪೇಜಾವರ ಶ್ರೀಗಳ ಅಗಲಿಕೆ ಹಿನ್ನಲೆಯಲ್ಲಿ ಚುನಾವಣೆಯಲ್ಲಿ ಯಾರು ಭಾಗವಹಿಸಿಲ್ಲ. ಈ ನಿಟ್ಟಿನಲ್ಲಿ ಚುನಾವಣೆ ಮತ್ತೆ ಮುಂದೂಡಿಕೆಯಾಗಿದೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್ ಹೇಳಿದ್ದಾರೆ.
ಪೇಜಾವರ ಶ್ರೀಗಳು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 3 ದಿನ ಶೋಕಾಚರಣೆ ಇದೆ. ಈ ನಿಟ್ಟಿನಲ್ಲಿ ಪಾಲಿಕೆ ಸದಸ್ಯರು ಸ್ವಯಂ ಪ್ರೇರಿತರಾಗಿ ಚುನಾವಣೆಗೆ ಬಂದಿಲ್ಲ ಎಂದು ಮುನೀಂದ್ರ ಕುಮಾರ್ ಹೇಳಿದ್ದಾರೆ.
ಕಳೆದ ಬಾರಿ ರಾಜ್ಯದಲ್ಲಿ ಉಪ ಚುನಾವಣೆ ಇದ್ದ ಹಿನ್ನೆಲೆಯಲ್ಲಿ ಸ್ಥಾಯಿ ಸಮಿತಿಗಳ ಚುನಾವಣೆಯಲ್ಲಿ ಯಾರು ಭಾಗವಹಿಸಲಿಲ್ಲ. ಈ ಬಾರಿಯೂ ಮತ್ತೆ ಚುನಾವಣೆ ಮುಂದೂಡಿಕೆಯಾಗಿದೆ ಎಂದರು.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಇನ್ನು ಚುನಾವಣೆಗೆ ಭಾನುವಾರ ನಾಮಪತ್ರ ಸಲ್ಲಿಕೆಯಾಗಬೇಕಿತ್ತು. ಆದರೆ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಈ ನಿಟ್ಟಿನಲ್ಲಿ ಚುನಾವಣೆಯನ್ನು ಮುಂದೂಡಲಾಗುತ್ತಿದೆ ಎಂದಿದ್ದಾರೆ.
ಈ ಹಿಂದೆ ರಾಜ್ಯದಲ್ಲಿ ಉಪ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿಯೂ ಕೂಡ ಸ್ಥಾಯಿ ಸಮಿತಿಗೆ ಚುನಾವಣೆ ನಿಗದಿ ಮಾಡಲಾಗಿತ್ತು. ಆದರೆ ಅಂದೂ ಕೂಡ ಯಾವುದೇ ಸದಸ್ಯರು ಆಸಕ್ತಿ ತೋರದ ಹಿನ್ನೆಲೆಯಲ್ಲಿ ಡಿಸೆಂಬರ್ 30ಕ್ಕೆ ನಿಗದಿಯಾಗಿತ್ತು. ಆದರೆ ಈಗಲೂ ಚುನಾವಣೆ ಮುಂದೂಡಲಾಗಿದೆ.