Asianet Suvarna News Asianet Suvarna News

ಕುಡಿವ ನೀರು ಕಲುಷಿತಗೊಳ್ಳದಂತೆ ಎಚ್ಚರವಹಿಸಿ: ಡೀಸಿ

ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿರುವ ಬಗ್ಗೆ ದೂರು ಬಂದಲ್ಲಿ ತಕ್ಷಣ ಗ್ರಾಮಪಂಚಾಯಿತಿ ಅಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟಅಧಿಕಾರಿಗಳ ಗಮನಕ್ಕೆ ತಂದು ತ್ಯಾಜ್ಯ ಅಥವಾ ರಾಸಾಯನಿಕಗಳು ಶುದ್ಧನೀರಿನ ಮೂಲಗಳಿಗೆ ಸೇರದಂತೆ ತಡೆಯುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.

Be careful not to contaminate drinking water with  D C  snr
Author
First Published Jan 17, 2023, 6:24 AM IST

 ತುಮಕೂರು :  ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿರುವ ಬಗ್ಗೆ ದೂರು ಬಂದಲ್ಲಿ ತಕ್ಷಣ ಗ್ರಾಮಪಂಚಾಯಿತಿ ಅಧಿಕಾರಿ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟಅಧಿಕಾರಿಗಳ ಗಮನಕ್ಕೆ ತಂದು ತ್ಯಾಜ್ಯ ಅಥವಾ ರಾಸಾಯನಿಕಗಳು ಶುದ್ಧನೀರಿನ ಮೂಲಗಳಿಗೆ ಸೇರದಂತೆ ತಡೆಯುವ ಮೂಲಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕೆಸ್ವಾನ್‌ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗಿನ ವಿಡಿಯೋ ಕಾನ್ಫರೆನ್ಸ್‌ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಡೆಂಘಿ ಪ್ರಕರಣಗಳು ಹೆಚ್ಚಳಗೊಳ್ಳದಂತೆ ಫಾಗಿಂಗ್‌, ಮನೆ ಸುತ್ತ ಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳುವಿಕೆ ಮುಂತಾದವುಗಳ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವಿಕೆ ಸೇರಿದಂತೆ ಅಗತ್ಯ ಮುನ್ನಚ್ಚಕೆ ಕ್ರಮ ವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗೆ 14 ಸಾವಿರ ಕೋವಿಶೀಲ್ಡ್‌ ಲಸಿಕೆ ಬರಲಿದ್ದು, ಈಗಾಗಲೇ 41 ಸಾವಿರದಷ್ಟುದಾಸ್ತಾನು ಇರುವಂತಹ ಕೋವ್ಯಾಕ್ಸಿನ್‌ ಲಸಿಕೆಗಳನ್ನು ಅರ್ಹರಿಗೆ ನೀಡಬೇಕು ಮತ್ತು ತಾಲೂಕು ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಲಸಿಕೆಗಳ ದಾಸ್ತಾನು ಪಡೆಯಬೇಕು. ತಿಂಗಳ ಮೊದಲನೇ ಶನಿವಾರ ಸ್ವಚ್ಛತಾ ದಿವಸ ಎಂದು ಪರಿಗಣಿಸಲಾಗಿದ್ದು, ಸರ್ಕಾರಿ ಕಚೇರಿ ಮುಖ್ಯಸ್ಥರು ತಮ್ಮ ತಮ್ಮ ಕಚೇರಿ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಆಭಾ ಕಾರ್ಡ್‌ ಪ್ರಗತಿ ಆಶಾದಾಯಕವಾಗಿಲ್ಲ ಮತ್ತು ಯುಡಿಐಡಿ ಕಾರ್ಡ್‌ ಜನರೇಟಿಂಗ್‌ ಕಾರ್ಯ ಬಾಕಿಯಿದೆ. ಎಲ್ಲರೂ ಈ ನಿಟ್ಟಿನಲ್ಲಿ ಲಕ್ಷ್ಯ ಕೊಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ‍್ಯಕ್ರಮದಲ್ಲಿ ಸಾರ್ವಜನಿಕರಿಂದ ಬಂದಂತಹ ಅರ್ಜಿಗಳು ತಮ್ಮ ವ್ಯಾಪ್ತಿಗೆ ಸಂಬಂಧಿಸಿದ್ದಲ್ಲಿ ನಿಗದಿತ ಸಮಯದೊಳಗೆ ಇತ್ಯರ್ಥಗೊಳಿಸಬೇಕು ಮತ್ತು ಇತರೆ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳಾದಲ್ಲಿ ಅ ಇಲಾಖೆಗೆ ವರ್ಗಾಯಿಸಿ ಸೂಕ್ತ ಹಿಂಬರಹ ನೀಡಬೇಕು ಎಂದು ತಹಸೀಲ್ದಾರ್‌ಗಳಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳು ಮತಗಟ್ಟೆಗಳನ್ನು ವೀಕ್ಷಿಸಲಿದ್ದು, ಈ ಸಂಬಂಧ ರೂಟ್‌ ಮ್ಯಾಪ್‌ ಸಿದ್ದಮಾಡಿಟ್ಟುಕೊಳ್ಳುವಂತೆ ಮತ್ತು ಕಳೆದ ಎಂಪಿ ಚುನಾವಣೆಯಲ್ಲಿ ಗಮನಿಸಿದಂತೆ ಕ್ರಿಟಿಕಲ್‌ ಮತ್ತು ವಲ್‌ನರಬಲ್‌ ಮತಗಟ್ಟೆಗಳ ಪಟ್ಟಿಮಾಡಿ ಸಲ್ಲಿಸುವಂತೆ ಮತ್ತು ಜ.25ರ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ವ್ಯವಸ್ಥಿತವಾಗಿ ಆಚರಿಸುವ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಚನ್ನಬಸಪ್ಪ ಅವರು ಎಇಆರ್‌ಓ, ಇಅರ್‌ಓ ಗಳಿಗೆ ಸೂಚಿಸಿದರು.

ಹೆಲಿಪ್ಯಾಡ್‌ಗೆ ಜಾಗ ಗುರುತಿಸಿ: ಜಿಲ್ಲಾಧಿಕಾರಿ

ಮಧುಗಿರಿ, ತಿಪಟೂರು, ಶಿರಾ, ಗುಬ್ಬಿ ಸೇರಿದಂತೆ ಉಪವಿಭಾಗೀಯ ಮಟ್ಟಮತ್ತು ತಾಲೂಕು ಮಟ್ಟದಲ್ಲಿ ಪಟ್ಟಣಗಳಿಗೆ ಸಮೀಪವಿರುವಂತೆ 1-2 ಎಕರೆ ಜಮೀನನ್ನು ಹೆಲಿಪ್ಯಾಡ್‌ ನಿರ್ಮಾಣ ಸಂಬಂಧ ಗುರುತಿಸಿ, ಪ್ರಸ್ತಾವನೆ ಸಲ್ಲಿಸುವಂತೆ ತಹಸೀಲ್ದಾರರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು, ಸ್ಮಶಾನ ಭೂಮಿ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಆರ್‌ಟಿಸಿ ಪ್ರಕಾರವೇ ಜಮೀನು ಲಭ್ಯವಿದ್ದಲ್ಲಿ ಸ್ಕೆಚ್‌ ಮಾಡಿ ಭೂಮಿ ಹಸ್ತಾಂತರಕ್ಕೆ ಕ್ರಮವಹಿಸುವುದು, ಆರ್‌ಟಿಸಿಗಿಂತ ವ್ಯತ್ಯಾಸವಿರುವ ಜಮೀನು ಇದ್ದಲ್ಲಿ ಸ್ಕೆಚ್‌ಗೆ ಮರು ಪ್ರಸ್ತಾವನೆ ಸಲ್ಲಿಸುವುದು ಎಂದು ತಿಳಿಸಿದರು.

ಮನೆ ನಿರ್ಮಾಣಕ್ಕೆ ಸೂಚನೆ ನೀಡಿ: ಸಿಇಒ

ಘನ ತ್ಯಾಜ್ಯ ವಿಲೇವಾರಿ ಘಟಕಗಳಿಗೆ ಸಂಬಂಧಿಸಿದಂತೆ ನಿವೇಶನ ಹಸ್ತಾಂತರ ಪ್ರಕ್ರಿಯೆ ಮಾಚ್‌ರ್‍ 31ರೊಳಗಾಗಿ ಗುರಿ ಮುಟ್ಟಬೇಕಿದ್ದು ಎಲ್ಲಾ ಇಓ, ಪಿಡಿಓ ಈ ನಿಟ್ಟಿನಲ್ಲಿ ಕಾರ‍್ಯಪ್ರವೃತ್ತರಾಗಬೇಕು ಮತ್ತು ಮಳೆ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ 810 ಮನೆಗಳ ಪೈಕಿ 279 ಮನೆಗಳು ತಳಪಾಯ ಹಂತದಲ್ಲಿದ್ದು, ಲಿಂಟಲ್‌ ಹಂತದವೆಗೂ ತರಬೇಕು, 44 ಮನೆಗಳು ಚಾವಣಿ ಹಂತದವರೆಗೂ ತರಬೇಕು ಮತ್ತು ಈಗಾಗಲೇ ಪರಿಹಾರವಾಗಿ 1 ಲಕ್ಷ ಪಡೆದಿರುವ ಸಂತ್ರಸ್ತರು ಇನ್ನೂ ಮನೆ ನಿರ್ಮಾಣ ಮಾಡದಿದ್ದಲ್ಲಿ ಅವರಿಗೆ ನೋಟಿಸ್‌ ನೀಡಿ ಮನೆ ಕಟ್ಟಲು ಪ್ರಾರಂಭಿಸುವಂತೆ ಸೂಚನೆ ನೀಡಬೇಕು ಎಂದು ಜಿಲ್ಲಾ ಪಂಚಾಯತ್‌ ಸಿಇಓ ವಿದ್ಯಾಕುಮಾರಿ ಅವರು ಪಿಡಿಓಗಳಿಗೆ ಸೂಚಿಸಿದರು.

Follow Us:
Download App:
  • android
  • ios