* ಮೂವರ ಮೇಲೆ ಕರಡಿ ದಾಳಿ* ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದ ಘಟನೆ * ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ
ಗಂಗಾವತಿ(ಮೇ.09): ಕರಡಿಯೊಂದು ನಗರದೊಳಗೆ ನುಗ್ಗಿ ಮೂವರ ಮೇಲೆ ದಾಳಿ ಮಾಡಿದ ಘಟನೆ ಇಂದು(ಭಾನುವಾರ) ಬೆಳ್ಳಂ ಬೆಳಿಗ್ಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.
Add Asianetnews Kannada as a Preferred Source

ಮೊದಲಿಗೆ ನಗರದ ಎಚ್ಆರ್ಎಸ್ ಕಾಲೋನಿಯಲ್ಲಿ ನುಗ್ಗಿದ ಕರಡಿ ಪಾರ್ಕ್ನಲ್ಲಿದ್ದ ನಗರಸಭೆ ನೌಕರ ಸೈಯದ್ ಕಾಸಿಂ ಅಲಿ ಎಂಬುವರ ಮೇಲೆ ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿದೆ. ನಗರದೊಳಗೆ ಕರಡಿ ಬಂದಿದ್ದರಿಂದ ಜನರು ಆತಂಕದಲ್ಲಿದ್ದಾರೆ.
ಅಪಾರ್ಟ್ಮೆಂಟ್ಗೆ ನುಗ್ಗಿದ ಕರಡಿ: 10 ಜನರ ಮೇಲೆ ದಾಳಿ
ಬಳಿಕ 5 ಗಂಟೆಗೆ ನಗರದ ಬಸ್ ನಿಲ್ದಾಣಕ್ಕೆ ನುಗ್ಗಿದ ಕರಡಿ ಇಬ್ಬರ ಮೇಲೆ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ. ಗಾಯಗೊಂಡ ಮೂವರನ್ನು ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಳೆದ 6 ತಿಂಗಳ ಹಿಂದೆಯೂ ಆನೆಗೊಂದಿ ರಸ್ತೆಯ ಮಾರ್ಗದಲ್ಲಿರುವ ಅಸ್ಪತ್ರೆಯ ಆವರಣಕ್ಕೆ ಕರಡಿಯೊಂದು ನುಗ್ಗಿತ್ತು.
