ಬೆಳಗಾವಿಯಲ್ಲಿರುವ ಸುವರ್ಣಸೌಧ ಕೋವಿಡ್‌ ಆರೈಕೆ ಕೇಂದ್ರ  ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಮಾಹಿತಿ ಅನಿವಾರ್ಯವಾದರೆ ಈ ಬಗ್ಗೆ ಚಿಂತನೆ ನಡೆಸಲಾಗುವುದು 

ಬೆಂಗಳೂರು (ಮೇ.): ಅನಿವಾರ್ಯವಾದರೆ ಬೆಳಗಾವಿಯಲ್ಲಿರುವ ಸುವರ್ಣಸೌಧವನ್ನು ಕೋವಿಡ್‌ ಆರೈಕೆ ಕೇಂದ್ರವನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸದ್ಯ ಹೊಟೇಲ್‌ ಅಥವಾ ಇನ್ನಿತರ ಕಟ್ಟಡಗಳನ್ನು ಆರೈಕೆ ಕೇಂದ್ರವನ್ನಾಗಿ ಮಾಡುತ್ತಿದ್ದೇವೆ. ಸುವರ್ಣಸೌಧವನ್ನು ಕೋವಿಡ್‌ ಆರೈಕೆ ಕೇಂದ್ರವನ್ನಾಗಿ ಮಾಡುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. 

ಬೆಳಗಾವಿ: 'ಸುವರ್ಣ ಸೌಧದಲ್ಲಿ ಕೋವಿಡ್ ಕೇರ್ ಸೆಂಟರ್‌ ಓಪನ್‌ ಮಾಡಿ ಜನರ ಜೀವ ಉಳಿಸಿ' ..

ಮುಂದೆ ಅನಿವಾರ್ಯವಾದರೆ ಈ ಬಗ್ಗೆ ಚಿಂತನೆ ನಡೆಸಲಾಗುವುದು ಎಂದಿದ್ದಾರೆ. ಸುವರ್ಣ ಸೌಧದಲ್ಲಿ ಕಳೆದೆರಡು ವರ್ಷಗಳಿಂದ ಅಧಿವೇಶನವೂ ನಡೆದಿಲ್ಲ. 

ಅಲ್ಲಿ ಸಾಕಷ್ಟುಸ್ಥಳಾವಕಾಶ ಇರುವ ಹಿನ್ನೆಲೆಯಲ್ಲಿ ಕೋವಿಡ್‌ ಆರೈಕೆ ಕೇಂದ್ರವನ್ನಾಗಿ ಮಾಡಿದರೆ ಬೆಳಗಾವಿ ಭಾಗದ ಸಾವಿರಾರು ಸೋಂಕಿತರಿಗೆ ಅನುಕೂಲವಾಗಲಿದೆ ಎಂದು ಆ ಭಾಗದ ಜನಪ್ರತಿನಿಧಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಸಾಮಾಜಿಕ ಮಾಧ್ಯಮದಲ್ಲಿಯೂ ಚರ್ಚೆ ಕೇಳಿಬಂದಿತ್ತು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona