ಜುಲೈ 06, 2025 ರಂದು ಬೆಳಿಗ್ಗೆ 7:00 ರಿಂದ 8:00 ರವರೆಗೆ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ನಿರ್ವಹಣಾ ಕಾರ್ಯಗಳಿಂದಾಗಿ ಈ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳಬೇಕು.
ಬೆಂಗಳೂರು (ಜು.04): ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಆರ್ಸಿಎಲ್) ನಿಗದಿತ ನಿರ್ವಹಣಾ ಕಾಮಗಾರಿಗಾಗಿ ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಡುವಿನ ನೇರಳೆ ಮಾರ್ಗದಲ್ಲಿ ಜುಲೈ 06, 2025 ರಂದು ಭಾನುವಾರ ಬೆಳಿಗ್ಗೆ 7:00 ರಿಂದ 8:00ರ ಒಂದು ಗಂಟೆಯವರೆಗೆ ಮೆಟ್ರೋ ಸೇವೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ.
ಭಾನುವಾರ ಬೆಳಗ್ಗೆ 7 ರಿಂದ 8 ಗಂಟೆವರೆಗೆ ಒಂದು ಗಂಟೆಯ ಅವಧಿಗೆ ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ ಮತ್ತು ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವಿನ ನೇರಳೆ ಮಾರ್ಗದಲ್ಲಿ ಅಗತ್ಯ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲಿದೆ. ಈ ಕಾಮಗಾರಿಗಳನ್ನು ನಿರ್ವಹಿಸಲು, ಇಂದಿರಾನಗರ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳ ನಡುವೆ ಮೆಟ್ರೋ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ. ಈ ಮಾರ್ಗದಲ್ಲಿ ಬೆಳಗ್ಗೆ 8 ಗಂಟೆ ನಂತರ ರಿಂದ ಸಾಮಾನ್ಯ ಸೇವೆಗಳನ್ನು ಪುನರಾರಂಭಿಸುತ್ತದೆ.
ಇತರ ಎಲ್ಲಾ ಮಾರ್ಗಗಳಲ್ಲಿ ಮೆಟ್ರೋ ಸೇವೆಗಳು ಯಾವುದೇ ಅಡೆತಡೆಯಿಲ್ಲದೆ ಕಾರ್ಯನಿರ್ವಹಿಸಲಿದ್ದು, ಚಲ್ಲಘಟ್ಟದಿಂದ ಇಂದಿರಾನಗರ, ಬೈಯಪ್ಪನಹಳ್ಳಿಯಿಂದ ವೈಟ್ ಫೀಲ್ಡ್ (ಕಾಡುಗೋಡಿ), ಮತ್ತು ಮಾದಾವರದಿಂದ ರೇಷ್ಮೆ ಸಂಸ್ಥೆ ವರೆಗಿನ ಸೇವೆಗಳು ಬೆಳಗ್ಗೆ 7 ಗಂಟೆಯಿಂದ ನಿಗದಿತ ಸಮಯದಂತೆ ಕಾರ್ಯನಿರ್ವಹಿಸಲಿದೆ. ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ ಅದಕ್ಕೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸುವಂತೆ ವಿನಂತಿಸಲಾಗಿದೆ. ಇದರಿಂದ ಉಂಟಾಗುವ ಅನಾನುಕೂಲತೆಗೆ ಬಿಎಂಆರ್ಸಿಎಲ್ ವಿಷಾದಿಸುತ್ತದೆ ಮತ್ತು ಸಾರ್ವಜನಿಕ ಸಹಕಾರವನ್ನು ಕೋರುತ್ತದೆ.
