ಎಸ್‌ಎಂವಿಟಿ ಬೆಂಗಳೂರಿನಿಂದ ಮೇ 29 ರಿಂದ ಜೂನ್ 27 ರವರೆಗೆ ಸಂಚರಿಸುವ ರೈಲು (06262) ಮತ್ತು ಕಲಬುರಗಿಯಿಂದ ಮೇ 30 ರಿಂದ ಜೂನ್ 28ರವರೆಗೆ ಸಂಚರಿಸುವ (06262) ರೈಲನ್ನು ರದ್ದು ಪಡಿಸಲಾಗಿದೆ. 

ಬೆಂಗಳೂರು(ಮೇ.28): ಸೆಂಟ್ರಲ್‌ ರೈಲ್ವೆ ವ್ಯಾಪ್ತಿಯಲ್ಲಿನ ಕಾರ್ಯಾಚರಣೆ ನಿರ್ಬಂಧಗಳ ಕಾರಣದಿಂದಾಗಿ ಬೆಂಗಳೂರಿನ ಸರ್‌ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ನಡುವೆ 14 ಟ್ರಿಪ್‌ ಸಂಚರಿಸಬೇಕಿದ್ದ ಬೇಸಿಗೆ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಸ್‌ಎಂವಿಟಿ ಬೆಂಗಳೂರಿನಿಂದ ಮೇ 29 ರಿಂದ ಜೂನ್ 27 ರವರೆಗೆ ಸಂಚರಿಸುವ ರೈಲು (06262) ಮತ್ತು ಕಲಬುರಗಿಯಿಂದ ಮೇ 30 ರಿಂದ ಜೂನ್ 28ರವರೆಗೆ ಸಂಚರಿಸುವ (06262) ರೈಲನ್ನು ರದ್ದು ಪಡಿಸಲಾಗಿದೆ

ಬೆಂಗಳೂರು: ನಾಗಸಂದ್ರ-ಮಾದಾವರ ಮಾರ್ಗದಲ್ಲಿ ಆಗಸ್ಟ್ ಒಳಗೆ ಮೆಟ್ರೋ ಸಂಚಾರ ಶುರು?

ಈ ಹಿಂದೆ ನೈಋತ್ಯ ರೈಲ್ವೆಯು, ಬೇಸಿಗೆ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಕಡಿಮೆಗೊಳಿಸುವ ಸಲುವಾಗಿ ಬೆಂಗಳೂರಿನ ಸರ್‌ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಕಲಬುರಗಿ ನಗರಗಳ ನಡುವೆ ವಾರಕ್ಕೆ ಮೂರು ಸಲ (ಸೋಮವಾರ, ಬುಧವಾರ ಮತ್ತು ಗುರುವಾರ) ಬೇಸಿಗೆ ವಿಶೇಷ ರೈಲು ಓಡಿಸುವುದಾಗಿ ತಿಳಿಸಿತ್ತು.