ಕೆ.ಆರ್.ಮಾರ್ಕೆಟ್ಗೆ ‘ಸ್ಮಾರ್ಟ್’ ಲುಕ್ | ಸ್ಮಾರ್ಟ್ಸಿಟಿ ಯೋಜನೆಯಡಿ 34 ಕೋಟಿ ವೆಚ್ಚದಲ್ಲಿ ಮಾರುಕಟ್ಟೆಯ ಪಾರಂಪರಿಕ ಕಟ್ಟಡ ಅಭಿವೃದ್ಧಿಗೆ ಯೋಜನೆ ಸಿದ್ಧ | ಸುಸಜ್ಜಿತ ಪಾರ್ಕಿಂಗ್ ವ್ಯವಸ್ಥೆ, ಲಿಫ್ಟ್, ಎಸ್ಕಲೇಟರ್ ಅಳವಡಿಕೆ | ಕಾಮಗಾರಿ ಪೂರ್ಣಗೊಳಿಸಲು ವರ್ಷ ಗಡುವು: ಗುಪ್ತಾ
ಬೆಂಗಳೂರು(ಜ.12): ನಗರದ ಕೃಷ್ಣರಾಜೇಂದ್ರ ಮಾರುಕಟ್ಟೆಯ ಪಾರಂಪರಿಕ ಕಟ್ಟಡವನ್ನು 34 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ ತಿಳಿಸಿದರು.
ಸೋಮವಾರ ಬೆಂಗಳೂರು ಸ್ಮಾಟ್ ಸಿಟಿ ಲಿಮಿಟೆಡ್ ಹಾಗೂ ಬಿಬಿಎಂಪಿಯ ಅಧಿಕಾರಿಗಳೊಂದಿಗೆ ಕೆ.ಆರ್.ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಆರ್. ಮಾರುಕಟ್ಟೆಕಟ್ಟಡವನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ 34 ಕೋಟಿ ರು. ವೆಚ್ಚದಲ್ಲಿ ನವೀಕರಣವಾಗಲಿದ್ದು, ನೀಲನಕ್ಷೆ ಸಿದ್ಧವಾಗಿದೆ.
ಕಟ್ಟಡವನ್ನು ಸುಸಜ್ಜಿತ ಕಟ್ಟಡವನ್ನಾಗಿ ಪರಿವರ್ತಿಸಿ ಪಾರ್ಕಿಂಗ್ ವ್ಯವಸ್ಥೆ, ರಾರಯಂಪ್ ಹಾಗೂ ಲಿಫ್ಟ್ ವ್ಯವಸ್ಥೆ ಕಲ್ಪಿಸಲಾಗುವುದು. ಇನ್ನು ಮಾಂಸ ಮಾರುಕಟ್ಟೆಯ ಸ್ಥಳದಲ್ಲಿರುವ ಮೂರು ಕಟ್ಟಡ (ಬ್ಲಾಕ್)ಗಳನ್ನು ತೆರವುಗೊಳಿಸಿ 14 ಕೋಟಿ ರು. ವೆಚ್ಚದಲ್ಲಿ ನೆಲ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. 17 ಕೋಟಿ ರು. ವೆಚ್ಚದಲ್ಲಿ ಕೆ.ಆರ್. ಮಾರುಕಟ್ಟೆಜಂಕ್ಷನ್ ಅಭಿವೃದ್ಧಿ, ಬಸ್ ಟರ್ಮಿನಲ…(ಬಸ್ ನಿಲುಗಡೆ ಸ್ಥಳ) ಹಾಗೂ ಸಬ್ ವೇ(ಪಾದಚಾರಿ ಸುರಂಗಮಾರ್ಗ) ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿಕೊಳ್ಳಲಾಗಿದೆ. ಒಂದು ವರ್ಷದಲ್ಲಿ ಕಾಮಗಾರಿ ಮುಗಿಸಲು ಗಡುವು ನೀಡಲಾಗಿದೆ ಎಂದು ತಿಳಿಸಿದರು.
ನಗರದಲ್ಲಿ 760 ಕೋವಿಡ್ ಲಸಿಕಾ ಕೇಂದ್ರ ಸ್ಥಾಪನೆ
ಕಾರ್ಯಪಾಲಕ ಎಂಜಿನಿಯರ್ ಚಂದ್ರಶೇಖರ್ ಮಾತನಾಡಿ, ಈಗಾಗಲೇ ಬಸ್ ಟರ್ಮಿನಲ…(ಬಸ್ ನಿಲುಗಡೆ ಸ್ಥಳ ಅಭಿವೃದ್ಧಿ) ಕಾಮಗಾರಿ ಪ್ರಾರಂಭವಾಗಿದೆ. ಒಂದು ಭಾಗದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿ ಎರಡು ತಿಂಗಳಲ್ಲಿ ಪೂರ್ಣಗೊಳಿಸಿದ ನಂತರ ಮತ್ತೊಂದು ಭಾಗದಲ್ಲಿ ಕಾಮಗಾರಿ ಆರಂಭಿಸಲಾಗುವುದು. ಪಾದಚಾರಿ ಸುರಂಗಮಾರ್ಗದಲ್ಲಿ ಆರು ಮಾರ್ಗಗಳಿದ್ದು, ಮೊದಲಬಾರಿಗೆ ಎಸ್ಕಲೇಟರ್ ಇರಲಿದೆ. ಪಾದಚಾರಿಗಳ ಅನುಕೂಲಕ್ಕಾಗಿ ಎಲ…ಇಡಿ ದೀಪಗಳ ಅಳವಡಿಕೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ, ಸಂಚಾರ ದಟ್ಟಣೆ ಕಡಿಮೆ ಮಾಡುವ, ಪಾದಚಾರಿಗಳ ಸುಗಮ ಸಂಚಾರಕ್ಕೆ ಅಗತ್ಯವಿರುವ ಮಾದರಿಯಲ್ಲಿ ಜಂಕ್ಷನ್ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಈ ವೇಳೆ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್, ದಕ್ಷಿಣ ವಲಯ ವಿಶೇಷ ಆಯುಕ್ತ ಬಸವರಾಜು, ಪಶ್ಚಿಮ ವಲಯ ಜಂಟಿ ಆಯುಕ್ತ ಶಿವಸ್ವಾಮಿ ಹಾಗೂ ಸ್ಮಾರ್ಟ್ ಸಿಟಿ ಮುಖ್ಯ ಎಂಜಿನಿಯರ್ ರಂಗನಾಥ ನಾಯ್್ಕ ಉಪಸ್ಥಿತರಿದ್ದರು.
ಸ್ಮಾರ್ಟ್ ಸಿಟಿ ಅಧಿಕಾರಿಗಳಿಗೆ ತರಾಟೆ
ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿ ಪಡಿಸಲಾಗುತ್ತಿರುವ ರಸ್ತೆಗಳನ್ನು ಸೋಮವಾರ ಪರಿಶೀಲನೆ ನಡೆಸಿದ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ಈ ಹಿಂದೆ ನೀಡಲಾಗಿದ್ದ ನಿರ್ದೇಶನಗಳನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಹೇಯ್ಸ… ರಸ್ತೆ, ಮೆಗ್ರಾತ್ ರಸ್ತೆ, ರೇಸ್ ಕೋರ್ಸ್ ರಸ್ತೆ, ವುಡ್ ಸ್ಟ್ರೀಟ್ ಹಾಗೂ ಟೇಟ್ಲೇನ್ ರಸ್ತೆಗಳನ್ನು ಜ.18ರ ಒಳಗಾಗಿ ಮುಗಿಸುವಂತೆ ತಾಕೀತು ಮಾಡಿದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 12, 2021, 8:35 AM IST