ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಉರುಳಿ ಬಿದ್ದು ಮೃತಪಟ್ಟ ಘಟನೆ ಸಂಬಂಧ ಮೃತ ಮಹಿಳೆಯ ಪತಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು  ಬಿಎಂಆರ್‌ಸಿಎಲ್‌ ಗೆ ಹೈಕೋರ್ಟ್ ತುರ್ತು ನೋಟಿಸ್‌ ನೀಡಿದೆ.

 ಬೆಂಗಳೂರು (ಜು.26): ನಗರದ ನಾಗವಾರದ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ ಉರುಳಿ ಬಿದ್ದು ತೇಜ್ವನಿಸಿ ಮತ್ತು ಆಕೆಯ ಪುತ್ರ ವಿಹಾನ್‌ ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ 10 ಕೋಟಿ ರು. ನಷ್ಟ ಪರಿಹಾರ ನೀಡಲು ಆದೇಶಿಸುವಂತೆ ಕೋರಿ ಮೃತ ಮಹಿಳೆಯ ಪತಿ ಸಲ್ಲಿಸಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತಕ್ಕೆ (ಬಿಎಂಆರ್‌ಸಿಎಲ್‌) ಹೈಕೋರ್ಟ್ ತುರ್ತು ನೋಟಿಸ್‌ ನೀಡಿದೆ.

Add Asianetnews Kannada as a Preferred SourcegooglePreferred

ಈ ವರ್ಷದ ಆರಂಭದಲ್ಲಿ ನಡೆದ ಈ ದುರಂತಕ್ಕೆ ಪರಿಹಾರ ಕೋರಿ ಮೃತ ಮಹಿಳೆಯ ಪತಿ ಲೋಹಿತ್‌ಕುಮಾರ್‌ ವಿ.ಸುಲಾಖೆ ಸಲ್ಲಿಸಿದ್ದ ತಕರಾರು ಅರ್ಜಿ ಸಲ್ಲಿಸಿದ್ದು ಬಿಎಂಆರ್‌ಸಿಎಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ ಎಂದು ದೂರಿದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಪೀಠ ತುರ್ತು ನೋಟಿಸ್‌ ನೀಡಿದೆ.

ಸಿಬ್ಬಂದಿಗಳ ನಿರ್ಲಕ್ಷಕ್ಕೆ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ಸಾವು, ಎಫ್‌ಐಆರ್‌ ದಾಖಲು

ಕೆಲ ಕಾಲ ಅರ್ಜಿದಾರ ಪರ ವಕೀಲ ಎಂ.ಎಫ್‌. ಹುಸೇನ್‌ ಅವರ ವಾದ ಆಲಿಸಿದ ನ್ಯಾಯಪೀಠ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರು, ಬೆಂಗಳೂರು ಜಿಲ್ಲಾಧಿಕಾರಿ ಹಾಗೂ ಮೆಟ್ರೋ ಕಾಮಗಾರಿ ಗುತ್ತಿಗೆದಾರ ಕಂಪನಿಯಾದ ಮೆ. ನಾಗಾರ್ಜುನ ಕನ್‌ಸ್ಟ್ರಕ್ಷನ್‌ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಅರ್ಜಿಯಲ್ಲಿನ ಎಂಟು ಮಂದಿ ಪ್ರತಿವಾದಿಗಳಿಗೆ ತುರ್ತು ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಎರಡು ವಾರ ಕಾಲ ಮುಂದೂಡಿತು.

2023ರ ಜ.24ರಂದು ಬಿಎಂಆರ್‌ಸಿಎಲ್‌ ಕಾರ್ಯಚರಣೆ ವಿಭಾಗದ ಎಂಜಿನಿಯರ್‌ ಅರ್ಜಿದಾರರಿಗೆ ಪತ್ರವನ್ನು ನೀಡಿ, ಪತ್ನಿ ಮತ್ತು ಪುತ್ರನ ಸಾವಿಗೆ ನಷ್ಟಪರಿಹಾರವಾಗಿ 20 ಲಕ್ಷ ರು. ನೀಡುವುದಾಗಿ ಹೇಳಿದ್ದರು. ಮೆಟ್ರೋ ನೀಡಿರುವ ಪರಿಹಾರವನ್ನು ಯಾವ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ .10 ಕೋಟಿ ಪರಿಹಾರ ನೀಡಬೇಕು. ಮೆಟ್ರೋ ಕಾಮಗಾರಿ ನಡೆಯುವ ಸ್ಥಳದಲ್ಲಿ ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲು ಬಿಎಂಆರ್‌ಸಿಎಲ್‌ಗೆ ನಿರ್ದೇಶನ ನೀಡಬೇಕು ಎಂದು ಲೋಹಿತ್‌ಕುಮಾರ್‌ ನ್ಯಾಯಾಲಯವನ್ನು ಕೋರಿದ್ದಾರೆ.

10, 12ನೇ ತರಗತಿಯಲ್ಲಿ ಫೇಲ್ ಆದ್ರೂ UPSC ಬರೆದು ಮೊದಲ ಪ್ರಯತ್ನದಲ್ಲೇ ಐಎಎಸ್ ಅಧಿಕಾರಿಯಾದ ಅಂಜು ಶರ್ಮಾ!

2023 ರ ಜನವರಿ 10 ರಂದು ನಾಗವಾರ ಬಳಿ ನಿರ್ಮಾಣ ಹಂತದಲ್ಲಿರುವ ಮೆಟ್ರೋ ಪಿಲ್ಲರ್ ಬಿದ್ದು ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಅರ್ಜಿದಾರರ ಪತ್ನಿ ತೇಜಸ್ವಿನಿ ಎಲ್ ಸುಲಾಖೆ (26) ಮತ್ತು ಅವರ ಎರಡೂವರೆ ವರ್ಷದ ಮಗ ವಿಹಾನ್ ಸಾವನ್ನಪ್ಪಿದರು. ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ತೇಜಸ್ವಿನಿ ತಿಂಗಳಿಗೆ ರೂ.75,748 ಗಳಿಸುತ್ತಿದ್ದರು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದ್ದು, ಅರ್ಜಿದಾರರು 20 ಲಕ್ಷ ಪರಿಹಾರವು ಸಮರ್ಪಕವಾಗಿಲ್ಲ, ಮತ್ತು ಇದು ಕೇವಲ ಸುರಕ್ಷತಾ ಕೆಲಸದ ನಿರ್ಲಕ್ಷ್ಯವನ್ನು ಮರೆಮಾಡಲು ಕೇವಲ ಪರಿಹಾರವಾಗಿದೆ ಮತ್ತು ಈ ಪ್ರಕರಣದಲ್ಲಿ ಹಾಜರಿದ್ದ ಎಲ್ಲಾ ಪ್ರತಿವಾದಿಗಳಿಗೆ ಸುರಕ್ಷತಾ ಮುನ್ನೆಚ್ಚರಿಕೆಗಳ ಬಗ್ಗೆ ಜ್ಞಾನದ ಕೊರತೆಯಿದೆ ಮತ್ತು ಹೇಗೆ ಎಲ್ಲಾ ಪ್ರತಿಕ್ರಿಯಿಸಿದವರು ಸುರಕ್ಷತಾ ಕ್ರಮಗಳ ಬಗ್ಗೆ ಅಸಡ್ಡೆ ಮತ್ತು ಅಜ್ಞಾನವನ್ನು ಹೊಂದಿದ್ದರು ಮತ್ತು ಇದರಿಂದಾಗಿ ಇಬ್ಬರು ಮುಗ್ಧ ಜೀವಗಳನ್ನು ಕಳೆದುಕೊಂಡರು ಎಂದು ವಾದಿಸಿದ್ದಾರೆ. 

ಇತ್ತೀಚೆಗಷ್ಟೇ ಸಾಲ ಮಾಡಿ ಫ್ಲಾಟ್‌ಗೆ ಖರೀದಿಸಿದ್ದೆವು ತೇಜಸ್ವಿನಿ ಕುಟುಂಬಕ್ಕೆ ಆಧಾರವಾಗಿದ್ದವರು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದ್ದು, ಸಂತ್ರಸ್ತ ಕುಟುಂಬಕ್ಕೆ 10 ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕೋರಲಾಗಿದೆ. ಪ್ರತಿವಾದಿಗಳಿಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಿದ ನಂತರ ನ್ಯಾಯಾಲಯವು ಪ್ರಕರಣವನ್ನು ಮುಂದೂಡಿದೆ.