ಶಿವಮೊಗ್ಗದಿಂದ ಸಂಚಾರ ಮಾಡುವ ರೈಲಿನ ಸಮಯ ಬದಲಾಗಿದೆ. ಯಶವಂತಪುರದಿಂದ - ಶಿವಮೊಗ್ಗ ನಡುವೆ ಸಂಚಾರ ಮಾಡುತ್ತಿದ್ದ ಜನಶತಾಬ್ದಿ ರೈಲು ಸಮಯ ಹಾಗೂ ಹೊರಡುವ ಸ್ಥಳವೂ ಬದಲಾಗಿದೆ.
ಶಿವಮೊಗ್ಗ (ಫೆ.01): ಶಿವಮೊಗ್ಗದಿಂದ - ಬೆಂಗಳೂರಿನ ಯಶವಂತಪುರಕ್ಕೆ ಸಂಚಾರ ಮಾಡುತ್ತಿದ್ದ ಜನಶತಾಬ್ದಿ ರೈಲು ವೇಳಾಪಟ್ಟಿ ಬದಲಾಗಿದೆ. ಬದಲಾದ ವೇಳಾಪಟ್ಟಿಗೆ ಅನುಗುಣವಾಗಿ ಪ್ರಯಾಣ ಆರಂಭವಾಗಿದೆ.
Add Asianetnews Kannada as a Preferred Source

ಶಿವಮೊಗ್ಗದಿಂದ ಬೆಳಗ್ಗೆ 5.30ಕ್ಕೆ ಹೊರಡುತ್ತಿದ್ದ ಜನಶತಾಬ್ದಿ ರೈಲು ಜ.31ರಿಂದ ಬೆಳಗ್ಗೆ 5.15ಕ್ಕೆ ಹೊರಡುತ್ತಿದೆ.
ಇಷ್ಟು ದಿನ ಶಿವಮೊಗ್ಗದಿಂದ ಯಶವಂತಪುರದವರೆಗೆ ಮಾತ್ರ ಚಲಿಸುತ್ತಿದ್ದ ರೈಲು ಇನ್ನುಮುಂದೆ ಮೆಜೆಸ್ಟಿಕ್ ತಲುಪುತ್ತದೆ.
ಶಿವಮೊಗ್ಗ-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ...
ಇನ್ನು ಮುಂದೆ ಯಶವಂತಪುರ ಬದಲಿಗೆ ಮೆಜೆಸ್ಟಿಕ್ನಿಂದ ಸಂಜೆ 5.15ಕ್ಕೆ ಹೊರಡುತ್ತದೆ. ಪ್ರಯಾಣಿಕರು ಬದಲಾಗಿರುವ ಸಮಯವನ್ನು ಗಮನಿಸುವಂತೆ ಸಂಸದ ಬಿ.ವೈ. ರಾಘವೇಂದ್ರ ಮನವಿ ಮಾಡಿದ್ದಾರೆ.
