ಬಿಇಒ ಪ್ರಯಾಣಿಸುತ್ತಿದ್ದ ಕಾರು ಅಪಘಾತ| ಬಳ್ಳಾರಿ ಜಿಲ್ಲೆಯ ಹೊಸಪೇಟೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -50ರ ಬಳಿ ನಡೆದ ಘಟನೆ| ತರೀಕೆರೆಯಿಂದ ಹೊಸಪೇಟೆ ಆಗಮಿಸುತ್ತಿದ್ದ ಬಿಇಒ ಸುನಂದಮ್ಮ| ಗಾಯಾಳುಗಳನ್ನು ನಗರದ ಆಸ್ಪತ್ರೆಗೆ ದಾಖಲು| 

ಹೊಸಪೇಟೆ(ಫೆ.07): ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ -50ರ ಬಳಿ ಬಿಇಒ ಸುನಂದಮ್ಮ ಪ್ರಯಾಣಿಸುತ್ತಿದ್ದ ಕಾರು ಶನಿವಾರ ಅಪಘಾತಕ್ಕೀಡಾಗಿದ್ದು, ಗಾಯಾಳುಗಳನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Add Asianetnews Kannada as a Preferred SourcegooglePreferred

ತರೀಕೆರೆಯಿಂದ ನಗರಕ್ಕೆ ಆಗಮಿಸುತ್ತಿದ್ದಾಗ ಬಿಇಒ ಪ್ರಯಾಣಿಸುತ್ತಿದ್ದ ಕಾರಿಗೆ ಲಾರಿಯೊಂದು ಬಲಭಾಗದಿಂದ ಡಿಕ್ಕಿ ಹೊಡೆದಿದೆ. ಲಾರಿ ಹೊಡೆತಕ್ಕೆ ಕಾರು ಪಲ್ಟಿಯಾಗಿದೆ. ಕಾರಿನಲ್ಲಿದ್ದ ಬಿಇಒ, ಶಿಕ್ಷಕ ಹಾಲೇಶ್‌ ನಾಯ್ಕ, ಚಾಲಕ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ. 

ಬಳ್ಳಾರಿ; ಸೀಟಿಂದ ಸೀಟಿಗೆ ಜಂಪ್ ಮಾಡುತ್ತ ಟಿಕೆಟ್ ಕೊಟ್ಟ ಕಂಡಕ್ಟರ್; ವಿಡಿಯೋ

ಗಾಯಾಳುಗಳನ್ನು ನಗರದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮರಿಯಮ್ಮನಹಳ್ಳಿ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.