ಈ ಮುಂಚೆ ಪಾಟ್ನಾದಲ್ಲಿದ್ದ ಆ ವೈದ್ಯರು ಇತ್ತೀಚೆಗೆ ಮೈಸೂರಿನಲ್ಲಿ ಅಪಾರ್ಟ್ ಮೆಂಟ್ ಖರೀದಿಸಿ, ಇಲ್ಲಿಗೆ ಸ್ಥಳಾಂತರವಾಗಿದ್ದಾರೆ. ಹೀಗಾಗಿ ನಿತೀಶ್ ಅವರು ಚಿಕಿತ್ಸೆಗಾಗಿ ಬಂದಿದ್ದರು. ಮಧ್ಯಾಹ್ನ 1 ರ ವೇಳೆಗೆ ವಿಶೇಷ ವಿಮಾನದಲ್ಲಿ ಪಾಟ್ನಾಗೆ ವಾಪಸ್ ಆದರು.
ಮೈಸೂರು(ಮಾ.21): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಬುಧವಾರ ಮೈಸೂರಿಗೆ ದಿಢೀರ್ ಭೇಟಿ ನೀಡಿದ್ದರು. ಎರಡು ತಾಸು ಇದ್ದು, ವೈದ್ಯರ ಬಳಿ ಚಿಕಿತ್ಸೆ ಪಡೆದು ವಾಪಸ್ ತೆರಳಿದ್ದಾರೆ. ನಿತೀಶ್ ಕುಮಾರ್ ಅವರೊಂದಿಗೆ ಜೆಡಿಯು ರಾಜ್ಯಸಭಾ ಸದಸ್ಯ ಸಂಜಯ್ ಕುಮಾರ್ ಜಾ, ಶಾಸಕ ಸಂಜೀವ್ ಕುಮಾರ್, ಬಿಜೆಪಿ ಮುಖಂಡ ರಜನೀಶ್ ಕುಮಾರ್ ಇದ್ದರು.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೆಳಗ್ಗೆ 11.15ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದ ಅವರು ನಂತರ ಎರಡು ಖಾಸಗಿ ಕಾರುಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ಲಕ್ಷ್ಮೀಪುರಂನಲ್ಲಿರುವ ವೈದ್ಯರ ಕ್ಲಿನಿಕ್ಗೆ ಭೇಟಿ ನೀಡಿದ್ದರು.
ಗುಲಾಮಗಿರಿಗೆ ಬಗ್ಗದ ಸ್ವಾಭಿಮಾನಿ ಎಂಬ ತೃಪ್ತಿ ಇದೆ: ಸಂಸದ ವಿ.ಶ್ರೀನಿವಾಸ ಪ್ರಸಾದ್
ಈ ಮುಂಚೆ ಪಾಟ್ನಾದಲ್ಲಿದ್ದ ಆ ವೈದ್ಯರು ಇತ್ತೀಚೆಗೆ ಮೈಸೂರಿನಲ್ಲಿ ಅಪಾರ್ಟ್ ಮೆಂಟ್ ಖರೀದಿಸಿ, ಇಲ್ಲಿಗೆ ಸ್ಥಳಾಂತರವಾಗಿದ್ದಾರೆ. ಹೀಗಾಗಿ ನಿತೀಶ್ ಅವರು ಚಿಕಿತ್ಸೆಗಾಗಿ ಬಂದಿದ್ದರು. ಮಧ್ಯಾಹ್ನ 1 ರ ವೇಳೆಗೆ ವಿಶೇಷ ವಿಮಾನದಲ್ಲಿ ಪಾಟ್ನಾಗೆ ವಾಪಸ್ ಆದರು.
