ಇದೀಗ ರಾಜ್ಯದ ವಿವಿಧ ಕಾಣಿಸಿಕೊಂಡಿದ್ದ ಆತಂಕ ಬೆಂಗಳೂರಿಗರಿಗೂ ಎದುರಾಗಿದೆ. ಕಾಗೆಗಳ ಸಾವಿನಿಂದ ಆತಂಕ ಎದುರಾಗಿದೆ. 

ಬೆಂಗಳೂರು [ಮಾ.18]: ದಾವಣಗೆರೆ ಮತ್ತು ಮೈಸೂರಿನಲ್ಲಿನ ಹಕ್ಕಿ ಜ್ವರದ ಭೀತಿ ಬೆಂಗಳೂರಿನಲ್ಲೂ ಉಂಟಾಗಿದೆ. ಆದರೆ, ಇದುವರೆಗೂ ಹಕ್ಕಿಜ್ವರದ ಸೋಂಕು ಪ್ರಕರಣ ಬೆಂಗಳೂರಿನಲ್ಲಿ ದೃಢಪಟ್ಟಿಲ್ಲ.

Add Asianetnews Kannada as a Preferred SourcegooglePreferred

ಕಳೆದ 15 ದಿನಗಳಲ್ಲಿ ರಾಜರಾಜೇಶ್ವರಿ ನಗರ, ಗಿರಿನಗರ, ಉತ್ತರಹಳ್ಳಿ, ಬ್ಯಾಟರಾಯನಪುರ, ಮಾಡಿವಾಳ, ವಿದ್ಯಾರಣ್ಯಪುರ, ಸಜ್ಜಾಪುರ ಸೇರಿದಂತೆ ವಿವಿಧೆಡೆ 85ಕ್ಕೂ ಹೆಚ್ಚು ಹಕ್ಕಿ, ಪಕ್ಷಿಗಳು ಇದಕ್ಕಿದಂತೆ ಸುತ್ತ ಬೀಳುತ್ತಿರುವ ವರದಿಯಾಗಿದೆ. ಮೃತ ಪಕ್ಷಿಗಳನ್ನು ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಆದರೆ, ಹಕ್ಕಿ-ಪಕ್ಷಿಗಳಲ್ಲಿ ಹಕ್ಕಿ ಜ್ವರದ ಸೋಂಕು ಇಲ್ಲ ಎಂದು ಪಶು ವೈದ್ಯಕೀಯ ಸಂಶೋಧನಾ ಸಂಸ್ಥೆ ದೃಢಪಡಿಸಿದೆ. ಈ ನಡುವೆ ಸೋಮವಾರ ಮತ್ತು ಮಂಗಳವಾರ ಮಹಾಲಕ್ಷ್ಮೇಪುರದ ಉದ್ಯಾನವನದ ಬಳಿ ಐದಕ್ಕೂ ಹೆಚ್ಚು ಕಾಗೆಗಳು ಒಂದೇ ಕಡೆ ಸತ್ತ ಬಿದ್ದಿದ್ದು ಆತಂಕ ಹೆಚ್ಚಿಸಿದೆ.

ಏರ್‌ಪೋರ್ಟ್‌ಲ್ಲಿ ನಡೆಯುತ್ತಿಲ್ಲ ಸಮರ್ಪಕ ಪರೀಕ್ಷೆ : ವಿದೇಶದಿಂದ ಬಂದ ಮಹಿಳೆ ಗಂಭೀರ ಆರೋಪ...

ಈಗಾಗಲೇ ಮೈಸೂರು ಮತ್ತು ದಾವಣಗೆರೆಯಲ್ಲಿ ಹಕ್ಕಿಜ್ವರ ಸೋಂಕು ಇರುವ ಬಗ್ಗೆ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹಕ್ಕಿ-ಪಕ್ಷಿ ಸತ್ತ ಪ್ರದೇಶದಲ್ಲಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಬಗ್ಗೆ ಆರೋಗ್ಯ ಇಲಾಖೆಯೊಂದಿಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದ ವನ್ಯಜೀವಿ ಸಂರಕ್ಷಕ ಪ್ರಸನ್ನ ಕುಮಾರ್‌ ‘ಕನ್ನಡಪ್ರಭ’ ಮಾಹಿತಿ ನೀಡಿದ್ದಾರೆ.

ವಿಷದ ಆಹಾರ, ನೀರು ಸೇವನೆ ಕಾರಣ: ಮೃತಪಟ್ಟಹೆಚ್ಚಿನ ಸಂಖ್ಯೆಯ ಹಕ್ಕಿ-ಪಕ್ಷಿಗಳು ನೀರಿನಲ್ಲಿರುವ ಪಕ್ಷಿಗಳಾಗಿವೆ. ಬೇಸಿಗೆ ಇರುವುದರಿಂದ ನಗರದ ಹಕ್ಕಿ-ಪಕ್ಷಿಗಳಿಗೆ ಕುಡಿಯುವುದಕ್ಕೆ ಶುದ್ಧವಾದ ನೀರು ಸಿಗುತ್ತಿಲ್ಲ. ಇನ್ನು ನಗರದ ಎಲ್ಲ ಕೆರೆಗಳು ಕೊಳಚೆ ನೀರು ಹಾಗೂ ಕಾರ್ಖಾನೆಗಳ ವಿಷಕಾರಿ ರಾಸಾಯನಿ ತ್ಯಾಜ್ಯ ನೀರಿನಿಂದ ತುಂಬಿಕೊಂಡಿವೆ. ಈ ವಿಷಕಾರಿ ನೀರು ಸೇವೆನೆಯಿಂದ ಹಕ್ಕಿ-ಪಕ್ಷಿಗಳು ನಿರಂತರವಾಗಿ ಮೃತಪಡುತ್ತಿವೆ ಎಂಬ ಸಂಶಯವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಆಯ್ದಾ ಸ್ಥಳದಲ್ಲಿ ಪಕ್ಷಿಗಳಿಗೆ ಕುಡಿಯುವ ನೀರಿನ ಕುಂಡಗಳ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಮನೆಯ ಮಹಡಿಯ ಮೇಲೆ ಪಕ್ಷಿಗಳಿಗೆ ಕುಡಿಯುವುದಕ್ಕೆ ನೀರಿನ ವ್ಯವಸ್ಥೆ ಮಾಡಿದರೆ ಅನುಕೂಲವಾಗಲಿದೆ ಎಂದು ಪ್ರಸನ್ನ ಕುಮಾರ್‌ ಮನವಿ ಮಾಡಿದ್ದಾರೆ.