ಚಳಿಗಾಲದಲ್ಲಿ ಮಾಲವಿ ಜಲಾಶಯ ನೋಡಲು ಬರುವವರಿಗೆ ಮಂಗೋಲಿಯದ ಅತಿಥಿಗಳನ್ನು ನೋಡುವ ಅವಕಾಶ ಸಿಗುತ್ತದೆ. ಸೂರ್ಯೋದಯಕ್ಕೂ ಮುಂಚಿತವಾಗಿ ಹೊಲಗದ್ದೆಗಳಲ್ಲಿ ತನ್ನ ಆಹಾರವನ್ನು ಸೇವಿಸುತ್ತವೆ. ನಂತರ ಬೆಳಿಗ್ಗೆ 8ಕ್ಕೆ ಮಾಲವಿ ಜಲಾಶಯ ಸೇರಿದಂತೆ ಸುತ್ತಮುತ್ತಲಿನ ಕೆರೆ, ನದಿ ಹಿನ್ನೀರಿನ ನಡುವೆ ತೇಲುತ್ತಾ ವಿಶ್ರಾಂತಿ ಪಡೆಯುತ್ತವೆ. ನೀರಲ್ಲಿರುವ ಮೀನುಗಳನ್ನು ತಿನ್ನದ ಈ ಹಕ್ಕಿಗಳು ಅಪ್ಪಟ ಸಸ್ಯಹಾರಿಗಳಾಗಿವೆ ಎಂಬುದು ಆಚ್ಚರಿಯ ಸಂಗತಿ.

ಭೀಮಣ್ಣ ಗಜಾಪುರ

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೂಡ್ಲಿಗಿ(ಜ.02): ಪರ್ವತದ ಹಕ್ಕಿ, ತಾಡಿಗ್ಯಾ, ಪಟ್ಟೆತಲೆಯ ಹೆಬ್ಬಾತು, ಗೀರು ತಲೆಯ ಬಾತು... ಹೀಗೆ ಹಲವು ಹೆಸರುಗಳಿಂದ ಕರೆಯುವ ವಿಶ್ವದಲ್ಲೇ ಅತ್ಯಂತ ಎತ್ತರದಲ್ಲಿ ಹಾರುವ ಹಕ್ಕಿಗಳು ಇದೀಗ ಮಂಗೋಲಿಯಾದಿಂದ ಇಲ್ಲಿಯ ಮಾಲವಿ ಕಿರು ಜಲಾಶಯಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಬಂದಿವೆ.

ಪ್ರತಿವರ್ಷ ಚಳಿಗಾಲದಲ್ಲಿ ಮಂಗೋಲಿಯಾದಿಂದ ಹಿಮಾಲಯ ಪರ್ವತ ಶ್ರೇಣಿಗಳನ್ನು ದಾಟಿ ಬೇಟೆಗಾರರು, ಪ್ರಾಕೃತಿಕ ವಿಕೋಪಗಳನ್ನೆಲ್ಲವನ್ನು ದಾಟಿಕೊಂಡು ವಿಜಯನಗರ ಜಿಲ್ಲೆಯ ಕೂಡ್ಲಿಗಿ, ಕೊಟ್ಟೂರು ತಾಲೂಕಿನ ಕೆರೆಗಳು ಸೇರಿದಂತೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲವಿ, ಚಿಮ್ಮನಹಳ್ಳಿಯ ಬಳಿ ಮಾಲವಿ ಡ್ಯಾಂ ಹಿನ್ನೀರಿಗೆ ಸಾವಿರಕ್ಕೂ ಹೆಚ್ಚು ಗೀರು ತಲೆಯ ಹೆಬ್ಬಾತುಗಳು ಬರುತ್ತವೆ.

ಬಿಜೆಪಿ ಭಿನ್ನರ ವಕ್ಫ್‌ ಹೋರಾಟ 2.0: ಕಂಪ್ಲಿಯಲ್ಲಿ ಜ.4ಕ್ಕೆ ಸಮಾವೇಶ, ರಮೇಶ್‌ ಜಾರಕಿಹೊಳಿ

ಚಳಿಗಾಲದಲ್ಲಿ ಮಾಲವಿ ಜಲಾಶಯ ನೋಡಲು ಬರುವವರಿಗೆ ಮಂಗೋಲಿಯದ ಅತಿಥಿಗಳನ್ನು ನೋಡುವ ಅವಕಾಶ ಸಿಗುತ್ತದೆ. ಸೂರ್ಯೋದಯಕ್ಕೂ ಮುಂಚಿತವಾಗಿ ಹೊಲಗದ್ದೆಗಳಲ್ಲಿ ತನ್ನ ಆಹಾರವನ್ನು ಸೇವಿಸುತ್ತವೆ. ನಂತರ ಬೆಳಿಗ್ಗೆ 8ಕ್ಕೆ ಮಾಲವಿ ಜಲಾಶಯ ಸೇರಿದಂತೆ ಸುತ್ತಮುತ್ತಲಿನ ಕೆರೆ, ನದಿ ಹಿನ್ನೀರಿನ ನಡುವೆ ತೇಲುತ್ತಾ ವಿಶ್ರಾಂತಿ ಪಡೆಯುತ್ತವೆ. ನೀರಲ್ಲಿರುವ ಮೀನುಗಳನ್ನು ತಿನ್ನದ ಈ ಹಕ್ಕಿಗಳು ಅಪ್ಪಟ ಸಸ್ಯಹಾರಿಗಳಾಗಿವೆ ಎಂಬುದು ಆಚ್ಚರಿಯ ಸಂಗತಿ.
ಮಾಲವಿ ಜಲಾಶಯದಲ್ಲಿ 2012ರಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಗೀರು ತಲೆಯ ಹೆಬ್ಬಾತುಗಳು ಬಂದಿದ್ದವು. ಇತ್ತೀಚಿನ ದಿನಗಳಲ್ಲಿ ಎಂತಹ ಮಳೆಗಾಲ ಬಂದರೂ ಮಾಲವಿ ಜಲಾಶಯಕ್ಕೆ ನೀರು ಬಾರದೇ ಯಾವಾಗಲೂ ಒಣಗಿದ ಸ್ಥಿತಿಯಲ್ಲಿ ಇತ್ತು. ಈ ವರ್ಷ ಯಥೇಚ್ಛ ಮಳೆಗಾಲವಾಗಿ ಡ್ಯಾಂ ತುಂಬಿದೆ. ಹೀಗಾಗಿ ಮಂಗೋಲಿಯಾದ ಹೆಬ್ಬಾತುಗಳಿಂದ ಮಾಲವಿ ಡ್ಯಾಂನಲ್ಲಿ ಮನಮೋಹಕ ದೃಶ್ಯ ನೋಡಬಹುದು.

ಬಳ್ಳಾರಿ ಘಟನೆ ಮಾಸುವ ಮುನ್ನವೇ ಕೊಪ್ಪಳದಲ್ಲಿ ಮತ್ತೋರ್ವ ಬಾಣಂತಿ ಸಾವು!

ನಮ್ಮ ಮಾಲವಿ, ಚಿಮ್ಮನಹಳ್ಳಿ ಸೇರಿದಂತೆ ಹತ್ತಾರು ಕಡೆ ಈ ಹಕ್ಕಿಗಳು ಮಂಗೋಲಿಯಾದಿಂದ ಚಳಿಗಾಲಕ್ಕೆ ಬರುತ್ತಿರುವುದು ನೋಡಿದರೆ ನಮಗೆ ಖುುಷಿಯಾಗುತ್ತದೆ. ಇಂತಹ ಹಕ್ಕಿಗಳ ಉಳಿವಿಗೆ ರೈತರು, ಎಲ್ಲರ ಸಹಕಾರ ಅಗತ್ಯವಿದೆ ಎಂದು ಮಾಲವಿ ರೈತ ಕೊಟ್ರೇಶ್ ತಿಳಿಸಿದ್ದಾರೆ.

ಮಾಲವಿ ಜಲಾಶಯದಲ್ಲಿ ಮೀನುಗಾರಿಕೆ ಟೆಂಡರ್ ಹಿಡಿದವರು ನಿರುಪದ್ರವಿ ಹಕ್ಕಿಗಳನ್ನು ಬೆದರಿಸಿ ಪಟಾಕಿ ಸಿಡಿಸಬಾರದು ಎನ್ನುವುದು ಪರಿಸರಪ್ರಿಯರ ಕಳಕಳಿಯಾಗಿದೆ. ಈ ಹಕ್ಕಿಗಳಿಗೆ ಕಾಲು ಬಲೆಹಾಕಿ ಬೇಟೆಯಾಡುವವರಿಗೇನು ಕಡಿಮೆಯಿಲ್ಲ. ಹೀಗಾಗಿ ಸುಂದರ ಹಕ್ಕಿಗಳು ಯಾವುದೇ ಆತಂಕವಿಲ್ಲದೆ ನಮ್ಮ ನಾಡಿನಿಂದ ಚಳಿಗಾಲ ಕಳೆದು ನಂತರ ಸುರಕ್ಷಿತವಾಗಿ ಪುನಃ ಮಂಗೋಲಿಯಾಕ್ಕೆ ಬೀಳ್ಕೊಡುಗೆ ಮಾಡಲು ರೈತರು ಮೀನುಗಾರರ ಸಹಕರಿಸಬೇಕು ಎಂದು ಪಕ್ಷಿಪ್ರೇಮಿ ವಿಜಯ್ ಇಟ್ಟಿಗಿ ಹೇಳಿದ್ದಾರೆ.