ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಈ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಆಣೆ ಪ್ರಮಾಣ ವಿಚಾರದಲ್ಲಿ ಧರ್ಮಸ್ಥಳ ಹೆಸರೆತ್ತಿದ ಕಾರಣಕ್ಕಾಗಿ ಮಂಜುನಾಥನ ದರ್ಶನಕ್ಕೆ ಆಗಮಿಸಿದ್ರಾ?
ಧರ್ಮಸ್ಥಳ (ಜೂ.26) ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ಶ್ರೀ ಕ್ಷೇತ್ರ ಧರ್ಮಸ್ಥಕ್ಕೆ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದಿದ್ದಾರೆ. ಇದೇ ವೇಳೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಡ್ಡ ಮತದಾನ ವಿಚಾರದಲ್ಲಿ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ವಿಚಾರ ಪ್ರಸ್ತಾಪಿಸಿದ ವಿಜಯೇಂದ್ರಗೆ ಪಕ್ಷದ ಹಿರಿಯರಿಂದಲೇ ಭಾರಿ ವಿರೋಧ ವ್ಯಕ್ತವಾಗಿತ್ತು. ಪರಿಣಾಮ ಆಣೆ ಪ್ರಮಾಣ ಕೈಬಿಡಲಾಗಿತ್ತು.ಆದರೆ ಆಣೆ ಪ್ರಮಾಣ ಹಾಗೂ ಧರ್ಮಸ್ಥಳ ಹೆಸರೆತ್ತಿದ ಕಾರಣ ಪ್ರಾಯಶ್ಚಿತ್ತಾಗಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ರಾ ಅನ್ನೋ ಚರ್ಚೆಗಳು ಶುರುವಾಗಿದೆ.
ದೆಹಲಿಯಲ್ಲಿ ಹೈಕಮಾಂಡ್ ಭೇಟಿಯಾದ ವಿಜಯೇಂದ್ರ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ವಿಜಯೇಂದ್ರ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ವೇಳೆ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಹರೀಶ್ ಪೂಂಜಾ, ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಯಶ್ ಪಾಲ್ ಸುವರ್ಣ ಭಾಗಿಯಾಗಿದ್ದಾರೆ.
ಆಣೆ ಪ್ರಮಾಣ ಕೈಬಿಟ್ಟು ವಿಜಯೇಂದ್ರ ಮಾತ್ರ ಧರ್ಮಸ್ಥಳ ಭೇಟಿ ನೀಡಿದ್ದು ಯಾಕೆ?
ಧರ್ಮಸ್ಥಳದ ಹೆಸರೆತ್ತಿದ ಪ್ರಾಯಶ್ಚಿತ್ತಕ್ಕಾಗಿ ಮಂಜುನಾಥನ ಬಳಿ ಬಂದ್ರಾ ವಿಜಯೇಂದ್ರ? ಅನ್ನೋ ಚರ್ಚೆಗಳು ಶುರುವಾಗಿದೆ. ಬೆಳಗ್ಗೆ 8 ಗಂಟೆಗೆ ಧರ್ಮಸ್ಥಳಕ್ಕೆ ಆಗಮಿಸಿದ ವಿಜಯೇಂದ್ರ ಮಂಜುನಾಥನ ದರ್ಶನ ಪಡೆದಿದ್ದಾರೆ. ವಿಜಯೇಂದ್ರ ಆಣೆ ಪ್ರಮಾಣ ಬಗ್ಗೆ ಪಕ್ಷದಲ್ಲೇ ಅಪಸ್ವರ ಕೇಳಿಬಂದಿತ್ತು. ಇದರ ಬೆನ್ನಲ್ಲೇ ಹೈಕಮಾಂಡ್ ಸೂಚನೆ ಬಳಿಕ ಆಣೆ ಪ್ರಮಾಣ ಕೈ ಬಿಡಲಾಗಿತ್ತು. ಮುಂಜುನಾಥನ ದರ್ಶನ ಬಳಿಕ ವಿಜಯೇಂದ್ರ ಸುದ್ದಿಗೋಷ್ಠಿ ನಡೆಸಲಿದ್ದಾರೆ.
ವಿಜಯೇಂದ್ರ ಆಣೆ ಪ್ರಮಾಣದ ಮಾತಿನ ಬೆನ್ನಲ್ಲೇ ವಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿದ್ದರು. ಇಷ್ಟೇ ಅಲ್ಲ ರಾಜಕೀಯವಾಗಿ ಧರ್ಮಸ್ಥಳ ವಿಚಾರ ಎಳೆದು ತರುವುದು ಬೇಡ ಎಂದು ಸಲಹೆ ನೀಡಿದ್ದರು. ಪರಿಷತ್ ಚುನಾವಣೆಯಲ್ಲಿ ಪಕ್ಷಕ್ಕೆ ದ್ರೋಹ, ವಂಚನೆ ಬಗೆದಿರುವುದು ನಿಜ. ಯಾವ ಶಾಸಕ ದ್ರೋಹ ಮಾಡಿದ್ದಾರೆ ಗೊತ್ತಿಲ್ಲ, ಆ ಕಾರಣಕ್ಕೆ ಅಧ್ಯಕ್ಷರ ಜೊತೆಗೆ ಮಾತನಾಡುತ್ತೇನೆ. 2019 ರಲ್ಲಿ ಕಾಂಗ್ರೆಸ್ ಶಾಸಕರು ಮುಂಬೈಗೆ ಹೋದಾಗ ಇದೇ ಕಾಂಗ್ರೆಸ್ ನಾಯಕರು ಕುದುರೆ ವ್ಯಾಪಾರ ಎಂದಿದ್ದರು. ನಮ್ಮ ಜೊತೆಗೆ ಕಾಂಗ್ರೆಸ್ ಶಾಸಕರು ಬಂದಾಗ ಆಪರೇಷನ್ ಕಮಲ ಎಂದು ಹೇಳಿದ್ದರು. ಆಗ ನಮಗೆ ಬುದ್ಧಿ ಹೇಳ್ತಿರಾ? ಈಗ ನೀವು ಮಾಡಿದ್ದೇನು, ನಾಚಿಕೆ ಆಗಲ್ವಾ? ಎಂದು ಆರ್ ಅಶೋಕ್ ಪ್ರಶ್ನಿಸಿದ್ದರು.


