2 ಕೋಟಿಗೂ ಅಧಿಕ ಮೌಲ್ಯದ 6077 ಕ್ವಿಂಟಾಲ್ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ್ ರಾಠೋಡ್ನನ್ನ ಬಂಧಿಸಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ ಅಕ್ಕಿ ಕಳ್ಳತನವಾಗಿತ್ತು.
ಕಲಬುರಗಿ(ಜು.16): ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ನನ್ನು ಪೊಲೀಸರು ಬಂಧಿಸಿದ್ದಾರೆ. ಇಂದು(ಮಂಗಳವಾರ) ಕಲಬುರಗಿ ನಗರದ ಭಾರತ ಪ್ರೈಡ್ ಅಪಾರ್ಟ್ಮೆಂಟ್ನಲ್ಲಿನ ಮನೆಯಿಂದ ಮಣಿಕಂಠ ರಾಠೋಡ್ನನ್ನು ಪೊಲೀಸರು ಬಂಧಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
2 ಕೋಟಿಗೂ ಅಧಿಕ ಮೌಲ್ಯದ 6077 ಕ್ವಿಂಟಾಲ್ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ್ ರಾಠೋಡ್ನನ್ನ ಬಂಧಿಸಲಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ಪಟ್ಟಣದಲ್ಲಿನ ಸರ್ಕಾರಿ ಗೋದಾಮಿನಿಂದ ಅಕ್ಕಿ ಕಳ್ಳತನವಾಗಿತ್ತು.
ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಮತ್ತೆ ಪೊಲೀಸರ ವಶಕ್ಕೆ!
ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಕಂಠ್ ಸಹೋದರನನ್ನ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಣಿಕಂಠ್ ರಾಠೋಡ್ಗೆ ಶಹಾಪುರ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ಹಿನ್ನಲೆಯಲ್ಲಿ ಮಣಿಕಂಠ್ನನ್ನು ಬಂಧಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲೂ ಮಣಿಕಂಠ್ ರಾಠೋಡ್ ಜಿಲ್ಲೆಯಿಂದ ಹೊರಗಿದ್ದರು.
