ಕೆಲಸ ಕೊಡಿಸುವುದಾಗಿ ಹೇಳಿ ಬಿಜೆಪಿ ಮುಖಂಡನಿಂದ ಲಕ್ಷಾಂತರ ರೂ. ವಂಚನೆ| ರಾಘವೇಂದ್ರ ಎಂಬುವರ ಮೇಲೆ ಕೇಳಿ ಬಂದ ಆರೋಪ| ಮದ್ಯವರ್ತಿ ಅಶೋಕ ಎಂಬುವರಿಂದ ಆರೋಪ| ಮಾರ್ಚ್‌ 3 ರಿಂದ ನಾಪತ್ತೆ‌ಯಾದ ಅಶೋಕ| 

ಬಾಗಲಕೋಟೆ(ಮಾ.11): ಡಿಸಿಸಿ ಬ್ಯಾಂಕ್‌ನಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಬಿಜೆಪಿ ಮುಖಂಡರೊಬ್ಬರು ಲಕ್ಷಾಂತರ ರೂ. ವಂಚನೆ ಮಾಡಿರುವ ಆರೋಪ ಬಾಗಲಕೋಟೆಯಲ್ಲಿ ಕೇಳಿ ಬಂದಿದೆ.

Add Asianetnews Kannada as a Preferred SourcegooglePreferred

ಬಿಜೆಪಿ ಮುಖಂಡ ರಾಘವೇಂದ್ರ ಎಂಬುವರ ಮೇಲೆ ವಂಚನೆ ಆರೋಪ ದಾಖಲಾಗಿದೆ. ವಂಚನೆಗೊಳಗಾದ ಮದ್ಯವರ್ತಿ ಅಶೋಕ ಎಂಬುವರು ಆರೋಪ ಮಾಡಿದ್ದಾರೆ.
ರಾಘವೇಂದ್ರ ಬಾಗಲಕೋಟೆ ಡಿಸಿಸಿ ಬ್ಯಾಂಕ್‌ನಲ್ಲಿ ಕೆಲಸ ಕೊಡಿಸುವುದಾಗಿ ಆಸೆ ತೋರಿಸಿ ಒಟ್ಟು 24.5 ಲಕ್ಷ ರೂ. ಹಣ ಪಡೆದುಕೊಂಡು ವಂಚಿಸಿದ್ದಾರೆ ಎಂದು ಹೇಳಲಾಗಿದೆ. ರಾಘವೇಂದ್ರ ಆರು ಜನ ಯುವಕರಿಗೆ ಕೆಲಸ ಕೊಡಿಸುವ ಭರವಸೆ ನೀಡಿದ್ದರು. 

ಮಾರ್ಚ್‌ 3 ರಿಂದ ಅಶೋಕ ಸಹ ನಾಪತ್ತೆ‌ಯಾಗಿದ್ದಾರೆ. ಈ ಸಂಬಂಧ ಅಶೋಕ ಪತ್ನಿ ಸುಖದೇವಿ ಅವರು ನವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.