Asianet Suvarna News Asianet Suvarna News

ಬಳ್ಳಾರಿಯಲ್ಲಿ ಕಮಲ ಅರಳೋದು ಖಚಿತ!

ಬಳ್ಳಾರಿ ಗಣಿ ನೆಲದಲ್ಲಿ ಕಮಲ ಅರಳೋದು ಖಚಿತ | ಬಿಜೆಪಿ ಅಭ್ಯರ್ಥಿ ಶಾಂತಾ ಗೆಲ್ಲೋದು ಖಚಿತ | ಉಗ್ರಪ್ಪರನ್ನು ತರಾಟೆಗೆ ತೆಗೆದುಕೊಂಡ ಶ್ರೀರಾಮುಲು 

BJP Leader Sriramulu express confidence about win BJP candidate in Bellary  By Election
Author
Bengaluru, First Published Nov 3, 2018, 12:51 PM IST

ಬಳ್ಳಾರಿ (ನ. 03): ಕಾಂಗ್ರೆಸ್ ಪಕ್ಷದ ನಾಯಕರು ನಾವು ಗೆಲ್ಲುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಹಣದಿಂದ ಗೆಲ್ಲುವ ಪ್ರಯತ್ನ ಮಾಡಿದ್ದಾರೆ. ಆದರೆ ಜನ ಹಣ ತಿರಸ್ಕಾರ ಮಾಡಿದ್ದಾರೆ. ನಮ್ಮ ಜಿಲ್ಲೆಯ ಜನ ನಮ್ಮನ್ನು ಕೈ ಬಿಡೋಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.   

ಬೈ ಎಲೆಕ್ಷನ್: ಮೈತ್ರಿ ಸರಕಾರದ ಮೇಲೆ ಪರಿಣಾಮವೇನು?

ಶಾಂತಾ ಅವರು ಗೆಲ್ಲುವ ವಿಶ್ವಾಸ ಇದೆ. ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಓದಿರೋರು.  ನಾವು ಮನುಷ್ಯರನ್ನು ಓದಿದವರು.  ಇವತ್ತು ಅವರ ಮನೆ , ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದೆ. ಇದನ್ನು ಸುದ್ದಿ ಮಾಡಿದ್ದಕ್ಕೆ ಪತ್ರಕರ್ತರ ಮೇಲೆ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ.  ಪತ್ರಕರ್ತರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ಪತ್ರಕರ್ತರ ಮೇಲೆ ಈ ದ್ವೇಷ ಸರಿಯಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.  

ಮಂಡ್ಯ ಉಪಚುನಾವಣೆ: ಕಬ್ಬು ಬೆಳೆಗಾರರಿಂದ ಮತದಾನ ಬಹಿಷ್ಕಾರ
Follow Us:
Download App:
  • android
  • ios