ಬಳ್ಳಾರಿ ಗಣಿ ನೆಲದಲ್ಲಿ ಕಮಲ ಅರಳೋದು ಖಚಿತ | ಬಿಜೆಪಿ ಅಭ್ಯರ್ಥಿ ಶಾಂತಾ ಗೆಲ್ಲೋದು ಖಚಿತ | ಉಗ್ರಪ್ಪರನ್ನು ತರಾಟೆಗೆ ತೆಗೆದುಕೊಂಡ ಶ್ರೀರಾಮುಲು
ಬಳ್ಳಾರಿ (ನ. 03): ಕಾಂಗ್ರೆಸ್ ಪಕ್ಷದ ನಾಯಕರು ನಾವು ಗೆಲ್ಲುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಹಣದಿಂದ ಗೆಲ್ಲುವ ಪ್ರಯತ್ನ ಮಾಡಿದ್ದಾರೆ. ಆದರೆ ಜನ ಹಣ ತಿರಸ್ಕಾರ ಮಾಡಿದ್ದಾರೆ. ನಮ್ಮ ಜಿಲ್ಲೆಯ ಜನ ನಮ್ಮನ್ನು ಕೈ ಬಿಡೋಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಬೈ ಎಲೆಕ್ಷನ್: ಮೈತ್ರಿ ಸರಕಾರದ ಮೇಲೆ ಪರಿಣಾಮವೇನು?
ಶಾಂತಾ ಅವರು ಗೆಲ್ಲುವ ವಿಶ್ವಾಸ ಇದೆ. ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಓದಿರೋರು. ನಾವು ಮನುಷ್ಯರನ್ನು ಓದಿದವರು. ಇವತ್ತು ಅವರ ಮನೆ , ಆಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ ನೀಡಿದೆ. ಇದನ್ನು ಸುದ್ದಿ ಮಾಡಿದ್ದಕ್ಕೆ ಪತ್ರಕರ್ತರ ಮೇಲೆ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ. ಪತ್ರಕರ್ತರ ಮೇಲೆ ದ್ವೇಷ ಸಾಧಿಸುತ್ತಿದ್ದಾರೆ. ಪತ್ರಕರ್ತರ ಮೇಲೆ ಈ ದ್ವೇಷ ಸರಿಯಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.
