Asianet Suvarna News Asianet Suvarna News

'ಪ್ರಧಾನಿ ಮೋದಿ ದೂರದೃಷ್ಟಿವುಳ್ಳ ವಿಚಾರ ಧಾರೆಗಳಿಂದ ದೇಶದ ಅಭಿವೃದ್ಧಿ'

ಮೋದಿ ಆಡಳಿತದಿಂದ ಅಭಿವೃದ್ಧಿಗೆ ಮುನ್ನುಡಿ| ಮೋಟೆಬೆನ್ನೂರಲ್ಲಿ ಮೋದಿ ಸಾಧನೆಗಳ ಕುರಿತು ಸಾರ್ವಜನಿಕರಿಗೆ ಕರಪತ್ರ ಹಂಚಿಕೆ| ದೇಶದ ರಕ್ಷಣೆಗಾಗಿ ಹಿಂದಿನ ಯಾವುದೇ ಸರ್ಕಾರಗಳೂ ಕೈಗೊಳ್ಳದ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಭದ್ರತಾ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ| ಹಲವು ಐತಿಹಾಸಿಕ ನಿರ್ಧಾರಗಳನ್ನು ತಗೆದುಕೊಳ್ಳುವ ಮೂಲಕ ದೇಶದ ಐಕ್ಯತೆ ಕಾಪಾಡುವಲ್ಲಿ ಶ್ರಮಿಸಿದ್ದಾರೆ|

BJP Leader Vijay bharath talks Over PM Narendra Modi Government
Author
Bengaluru, First Published Jun 13, 2020, 10:12 AM IST

ಬ್ಯಾಡಗಿ(ಜೂ.13): ಪ್ರಧಾನಿ ನರೇಂದ್ರ ಮೋದಿಯವರ ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ, ದೂರದೃಷ್ಟಿವುಳ್ಳ ವಿಚಾರ ಧಾರೆಗಳಿಂದ ದೇಶದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬದಲಾವಣೆ ತಂದಿದ್ದಾರೆ ಎಂದು ಬಿಜೆಪಿ ಯುವ ಮುಖಂಡ ವಿಜಯ ಭರತ ಬಳ್ಳಾರಿ ಹೇಳಿದ್ದಾರೆ.

ತಾಲೂಕಿನ ಮೋಟೆಬೆನ್ನೂರ ಗ್ರಾಮದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಎರಡನೇ ಅವಧಿಯ ಮೊದಲ ವರ್ಷದ ಸಾಧನೆಗಳ ಕುರಿತು ಸಾರ್ವಜನಿಕರಿಗೆ ಕರಪತ್ರಗಳನ್ನು ಹಂಚಿ ಮಾತನಾಡಿದ ಅವರು, ದೇಶದ ರಕ್ಷಣೆಗಾಗಿ ಹಿಂದಿನ ಯಾವುದೇ ಸರ್ಕಾರಗಳೂ ಕೈಗೊಳ್ಳದ ನಿರ್ಣಯಗಳನ್ನು ಕೈಗೊಳ್ಳುವ ಮೂಲಕ ಭದ್ರತಾ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಅಲ್ಲದೇ ಹಲವು ಐತಿಹಾಸಿಕ ನಿರ್ಧಾರಗಳನ್ನು ತಗೆದುಕೊಳ್ಳುವ ಮೂಲಕ ದೇಶದ ಐಕ್ಯತೆ ಕಾಪಾಡುವಲ್ಲಿ ಶ್ರಮಿಸಿದ್ದಾರೆ ಎಂದರು.

ಮಹಾಮಾರಿ ಕೊರೋನಾ ಸೋಂಕು ಮುಕ್ತ ಹಾವೇರಿ

ಈ ಸಂದರ್ಭದಲ್ಲಿ, ಶಿವಪ್ಪ ಹರಮಗಟ್ಟಿ, ರಾಮಪ್ಪ ಮಣಕೂರ, ಬಷೀರಅಹ್ಮದ್‌ ತಳಗೇರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
 

Follow Us:
Download App:
  • android
  • ios