ಏಪ್ರಿಲ್ 27 ರಿಂದ 14 ದಿನ ಜನತಾ ಕರ್ಫ್ಯೂ| ನಾನು ಲಾಕ್‌ಡೌನ್‌ ವಿರೋಧಿಯಲ್ಲ. ಆದರೆ, ಇದರಿಂದ ಬಡವರು, ಕೂಲಿಕಾರರ ಮೇಲಾಗುವ ಪರಿಣಾಮಗಳನ್ನು ಅರಿಯಬೇಕಿತ್ತು| ಸರ್ಕಾರ ಈ ಬಗ್ಗೆ ಮತ್ತೊಮ್ಮೆ ಯೋಚಿಸಬೇಕು: ಸೋಮಶೇಖರ ರೆಡ್ಡಿ|  

ಬಳ್ಳಾರಿ(ಏ.28): ಜನತಾ ಕರ್ಫ್ಯೂ ಹಾಗೂ ಲಾಕ್‌ಡೌನ್‌ನಿಂದ ಬಡವರಿಗೆ ತೀವ್ರ ಸಮಸ್ಯೆಯಾಗಲಿದೆ. ರಾಜ್ಯ ಸರ್ಕಾರ ಲಾಕ್‌ಡೌನ್‌ ಮಾಡುವ ಮುಂಚೆ ಯೋಚನೆ ಮಾಡಬೇಕಿತ್ತು ಎಂದು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಮಂಗಳವಾರ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಲಾಕ್‌ಡೌನ್‌ ವಿರೋಧಿಯಲ್ಲ. ಆದರೆ, ಇದರಿಂದ ಬಡವರು, ಕೂಲಿಕಾರರ ಮೇಲಾಗುವ ಪರಿಣಾಮಗಳನ್ನು ಅರಿಯಬೇಕಿತ್ತು ಎಂದರಲ್ಲದೆ, ಸರ್ಕಾರ ಈ ಬಗ್ಗೆ ಮತ್ತೊಮ್ಮೆ ಯೋಚಿಸಬೇಕು ಎಂದರು.

14 ದಿನ ಕರ್ನಾಟಕ ಲಾಕ್‌ಡೌನ್: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ನಿನ್ನೆಯಿಂದ(ಏಪ್ರಿಲ್ 27 ರಿಂದ 14 ದಿನ ಕರ್ನಾಟಕವನ್ನು ಲಾಕ್​ಡೌನ್ ಮಾಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರ್ಧಾರ ತೆಗೆದುಕೊಂಡಿದ್ದರು.