ಕೇಂದ್ರ ಮಾಜಿ ಸಚಿವ ಹಾಗೂ ಬಿಜೆಪಿ ಸಂಸದ ಅನಂತ್ ಕುಮಾರ ಹೆಗಡೆ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 

ಶಿರಸಿ (ಮಾ.07): ಕೇಂದ್ರದ ಮಾಜಿ ಸಚಿವ, ಸಂಸದ ಅನಂತ ಕುಮಾರ್‌ ಹೆಗಡೆ ಕಾಲಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆಲ ಕಾಲ ಅವರು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಸಾರ್ವಜನಿಕರ ಭೇಟಿಗೆ ಲಭ್ಯವಾಗುವುದಿಲ್ಲ ಎಂದು ಅವರ ಆಪ್ತ ಕಾರ್ಯದರ್ಶಿ ಸುರೇಶ್‌ ಶೆಟ್ಟಿತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಅನಂತ ಕುಮಾರ್‌ ಹೆಗಡೆ ಅವರಿಗೆ ಕಳೆದ ಹಲವು ವರ್ಷಗಳಿಂದ ತೀವ್ರ ತರವಾದ ಬೆನ್ನು ನೋವು ಮತ್ತು ಕಾಲು ನೋವು ಕಾಡುತ್ತಿತ್ತು. 

ಅನಂತಕುಮಾರ್ ಹೆಗಡೆ ಪುಸ್ತಕ ಓದಲಿ: ಸಂಸದರಿಗೆ ನೂತನ ಮೇಯರ್ ಟಾಂಗ್ ...

ಇತ್ತೀಚೆಗೆ ಬೆನ್ನು ನೋವು ಮತ್ತು ಕಾಲು ನೋವು ಉಲ್ಬಣಗೊಂಡಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷಿಸಿದ ವೈದ್ಯರು ತಕ್ಷಣವೇ ಕಾಲಿಗೆ ಸೂಕ್ತ ಶಸ್ತ್ರ ಚಿಕಿತ್ಸೆ ನಡೆಸುವಂತೆ ಸೂಚಿಸಿದ್ದರು. ಕೆಲ ದಿನಗಳ ಹಿಂದೆ ಮಂಗಳೂರಿನಲ್ಲಿ ಈ ಶಸ್ತ್ರ ಚಕಿತ್ಸೆ ನಡೆಸಲಾಗಿದ್ದು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.