ಗಾಣಗಾಪೂರ ಅಭಿವೃದ್ಧಿ ಕುರಿತು ಸರ್ಕಾರ ಬೇಜವಾಬ್ದಾರಿತನ ತೋರಿಸುತ್ತಿದೆ. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು ಈ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಆಗಬೇಕಾಗಿತ್ತು. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ ಆಗಲಿ. ಪ್ರಾಧಿಕಾರ ರಚನೆ ಮಾಡುವ ಕುರಿತು ಒಂದು ನಿಯೋಗ ಬೆಂಗಳೂರಿಗೆ ಬರಲಿ, ನಾನು ಅವರೊಂದಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ ಎಂದ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್‌ 

ಕಲಬುರಗಿ(ಜು.16): ಕಲಬುರಗಿ ಜಿಲ್ಲೆಯ ಅಫಜಲಪೂರ ತಾಲೂಕಿನಲ್ಲಿರುವ ಸುಕ್ಷೇತ್ರ ದೇವಲ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್‌ ಪತ್ನಿ ಪರಿಮಳ ಹಾಗೂ ಕುಟುಂಬದವರು ಇಂದು(ಮಂಗಳವಾರ) ಭೇಟಿ ನೀಡಿದ್ದಾರೆ. 

Add Asianetnews Kannada as a Preferred SourcegooglePreferred

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಜಗ್ಗೇಶ್‌ ಅವರು, ನಮ್ಮ ಕುಟುಂಬದವರು ಸುಕ್ಷೇತ್ರ ದೇವಲ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ವೈಯಕ್ತಿಕ ಕಾರಣಗಳಿಂದ ಭೇಟಿ ನೀಡಿದ್ದಾಗಿ ತಿಳಿಸಿದ್ದಾರೆ. 

ಚಿತ್ರರಂಗದವರಲ್ಲಿ ಶಿಸ್ತು ಕಮ್ಮಿಯಾಗಿದೆ, ದರ್ಶನ್‌ ಪ್ರಕರಣದ ಬಗ್ಗೆ ಮಾತನಾಡಲ್ಲ: ನಟ ಜಗ್ಗೇಶ್

ಗಾಣಗಾಪೂರ ಅಭಿವೃದ್ಧಿ ಕುರಿತು ಸರ್ಕಾರ ಬೇಜವಾಬ್ದಾರಿತನ ತೋರಿಸುತ್ತಿದೆ. ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಸ್ಥಳವಾಗಿದ್ದು ಈ ಕ್ಷೇತ್ರ ಸಾಕಷ್ಟು ಅಭಿವೃದ್ಧಿ ಆಗಬೇಕಾಗಿತ್ತು. ಈ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ ಆಗಲಿ. ಪ್ರಾಧಿಕಾರ ರಚನೆ ಮಾಡುವ ಕುರಿತು ಒಂದು ನಿಯೋಗ ಬೆಂಗಳೂರಿಗೆ ಬರಲಿ, ನಾನು ಅವರೊಂದಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇವೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್‌ ತಿಳಿಸಿದ್ದಾರೆ.