ಬಿಜೆಪಿ  ಮುಖಂಡರೋರ್ವರು ಡಿಸಿಎಂ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇಳೆ ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾರೆ. 

ಮಾಗಡಿ (ಡಿ.11): ಬಿಜೆಪಿ ಕಾರ್ಯಕರ್ತರೊಬ್ಬರು ವೇದಿಕೆಯಲ್ಲಿಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಾಗಡಿ ಪಟ್ಟಣದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಶಿವರಾಜು ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅವರು ಸಾವನ್ನಪ್ಪಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಪಟ್ಟಣದ ಕೆಂಪೇಗೌಡ ಬಯಲು ರಂಗಮಂದಿರದಲ್ಲಿ ಕೆಂಪೇಗೌಡ ಅಭಿವೃದ್ಧಿ ಸಮಿತಿ ಅಧ್ಯಕ್ಷ ಎಚ್‌.ಎಂ.ಕೃಷ್ಣಮೂರ್ತಿ ಅವರು ಬಿಜೆಪಿ ಸೇರ್ಪಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಸಿ.ಎನ್‌.ಅಶ್ವತ್ಥ ನಾರಾ​ಯಣ ಪಾಲ್ಗೊಂಡಿ​ದ್ದರು. 

ಕರ್ನಾಟಕದಲ್ಲಿ ಗೋ ಹತ್ಯೆ ನಿಷೇಧ ಮಸೂದೆ ಪಾಸ್: ಇಲ್ಲಿವೆ ಕಾಯ್ದೆಯಲ್ಲಿರುವ 25 ಅಂಶಗಳು ..

ಕಾರ್ಯಕ್ರಮ ಮುಗಿಸಿ, ಅಶ್ವ​ತ್ಥ​ನಾ​ರಾ​ಯಣ ತೆರಳಿದ ನಂತರ ಸುಮಾರು 10.30ರ ಸಮಯದಲ್ಲಿ ವೇದಿಕೆಯ ಮೇಲಿದ್ದ ಬಿಜೆಪಿ ಕಾರ್ಯ​ಕರ್ತ ಶಿವರಾಜು (48) ಕುಸಿದು ಬಿದ್ದಿದ್ದಾರೆ.

 ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲಿಯೇ ಕೊನೆ​ಯು​ಸಿ​ರೆ​ಳೆ​ದಿ​ದ್ದಾ​ರೆ. ಮೃತ ಶಿವರಾಜು ತಿಪ್ಪಸಂದ್ರ ಹೋಬಳಿಯ ಹೆಬ್ಬಳಲು ಗ್ರಾಮದವರಾಗಿದ್ದು, ಹೋಟೆಲ್ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದರು, ಇವರಿಗೆ ಕಳೆದ ವರ್ಷ ಹೃದಯ ಶಸ್ತ್ರಚಿಕಿತ್ಸೆಯಾಗಿತ್ತು ಎಂದು ತಿಳಿದು ಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.