ಇಂದಿನಿಂದ ಬೆಂಗಳೂರು ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಬಸ್ ಸೇವೆ ಆರಂಭವಾಗುತ್ತಿದೆ. ಇದರಿಂದ ರೈಲು ಪ್ರಯಾಣಿಕರಿಗೆ ಅನುಕೂಲ ಒದಗಲಿದೆ.

ಬೆಂಗಳೂರು [ಡಿ.16]: ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ) ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ(ಕೆಎಸ್‌ಆರ್‌) ರೈಲು ನಿಲ್ದಾಣದ ಮೂರನೇ ಪ್ರವೇಶ ದ್ವಾರದಿಂದ ನಗರದ ವಿವಿಧ ಭಾಗಗಳಿಗೆ ತೆರಳುವ ಪ್ರಯಾಣಿಕರ ಅನುಕೂಲಕ್ಕಾಗಿ ಇಂದಿನಿಂದ ಬಸ್‌ ಸೇವೆ ಆರಂಭಿಸುತ್ತಿದೆ.

Add Asianetnews Kannada as a Preferred SourcegooglePreferred

ಮೊದಲ ಹಂತದಲ್ಲಿ ರೈಲು ನಿಲ್ದಾಣದಿಂದ ನಗರದ ಕಾಡುಗೋಡಿ, ಹೊಸಕೋಟೆ, ಅತ್ತಿಬೆಲೆ, ಸರ್ಜಾಪುರ, ಯಲಹಂಕ ಹಾಗೂ ನಾಗವಾರಕ್ಕೆ ತಲಾ 9 ಬಸ್‌ಗಳಂತೆ ಒಟ್ಟು 54 ಬಸ್‌ಗಳ ಕಾರ್ಯಾಚರಣೆ ಮಾಡಲಿದೆ. 

ಈ ಬಸ್‌ಗಳು ಬೆಳಗ್ಗೆ 6ರಿಂದ ರಾತ್ರಿ 10.30ರವರೆಗೆ ಕಾರ್ಯಾಚರಿಸಲಿವೆ. ಮುಂದಿನ ದಿನಗಳಲ್ಲಿ ಪ್ರಯಾಣಿಕರ ದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ನಗರದ ವಿವಿಧ ಕಡೆ ಬಸ್‌ ಸೇವೆ ಆರಂಭಿಸುವುದಾಗಿ ಬಿಎಂಟಿಸಿ ತಿಳಿಸಿದೆ.

1 ವರ್ಷದಲ್ಲಿ 70 ಬಾರಿ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದ : ಬಿದ್ದ ದಂಡದ ಮೊತ್ತವೆಷ್ಟು.?...

ಅನೇಕ ದಿನಗಳ ಹಿಂದೆಯೇ ಸರ್ಕಾರವು ಈ ಬಗ್ಗೆ ಯೋಜನೆ ರೂಪಿಸಿದ್ದು, ಇದೀಗ ಕಾರ್ಯರೂಪಕ್ಕೆ ಬರಲು ಸಜ್ಜಾಗಿದೆ. ಇದರಿಂದ ಹಲವು ಪ್ರದೇಶಗಳಿಂದ ಬೆಂಗಳೂರಿಗೆ ಆಗಮಿಸುವ ರೈಲು ಪ್ರಯಾಣಿಕರು ಅನೂಕೂಲ ಪಡೆದುಕೊಳ್ಳಬಹುದಾಗಿದೆ.